News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ನವಲಗುಂದ: ಗ್ಯಾಸ್‌ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ವಿಭಿನ್ನ ಪ್ರತಿಭಟನೆ

Navalgund: protests against gas cylinder price hike
Photo Credit : News Kannada

ನವಲಗುಂದ: ನವಲಗುಂದ ಹಾಗೂ ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಂದ ಗೃಹ ಉಪಯೋಗಿ ಗ್ಯಾಸ್‌ ಸಿಲಿಂಡರ್ ಬೆಲೆ ಏರಿಕೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಮಾಜಿ ಶಾಸಕರ ನೇತೃತ್ವದಲ್ಲಿ ಗ್ಯಾಸ ಸಿಲಿಂಡರ್ ಹೊತ್ತು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪದೇ ಪದೇ ಅಡುಗೆ ಅನಿಲ ದರ (ಗ್ಯಾಸ್ ಸಿಲಿಂಡರ್) ಹೆಚ್ಚಿಸುತ್ತಿದ್ದು ಈಗ ಮತ್ತೇ ರೂ. 50 ಏರಿಕೆ ಮಾಡಿದ್ದರಿಂದ ಸಾರ್ವಜನಿಕರಿಗೆ ಜೀವನ ನಡೆಸುವುದೇ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ-ನವಲಗುಂದ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ನವಲಗುಂದ ನಗರದ ಲಿಂಗರಾಜ್ ವೃತ್ತದಲ್ಲಿ ಬಂದ ಮಾಡಿ ಕಾಂಗ್ರೆಸ್ ವತಿಯಿಂದ ಬೆಲೆ ಏರಿಕೆ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಜೊತೆಗೆ ತಕ್ಷಣ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳಿಲಿ ಎಂದು ಕಾಂಗ್ರೆಸ್ ನ ಎಲ್ಲ ಮುಖಂಡರುಗಳು, ಕಾರ್ಯಕರ್ತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎನ್ ಎಚ್ ಕೊನರಡ್ಡಿ ಮಾತನಾಡುತ್ತಾ ಕಾಂಗ್ರೆಸ್ ಸರ್ಕಾರದ ಅಧಿಕಾರದಲ್ಲಿ ಕೇವಲ 450 ಇದ್ದ ದರ ಈಗ 1150ಕ್ಕೆ ತಲುಪಿದೆ. ಇದಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಕಾರಣ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರಿಗೆ ಗ್ಯಾಸ್ ಸಿಲಿಂಡರ್ ಉಪಯೋಗಿಸಲು ಆರ್ಥಿಕ ತೊಂದರೆಯಾಗಿದೆ. ಈಗಾಗಲೇ ಪೆಟ್ರೋಲ್, ಡಿಸೇಲ್ ಮುಂತಾದ ವಸ್ತುಗಳ ಬೆಲೆ ಏರಿಕೆ ಹಾಗೂ ಎಲ್ಲ ಪದಾರ್ಥಗಳ ಮೇಲೆ ಜಿಎಸ್‌ಟಿ ಹೇರಿಕೆಯಿಂದ ತತ್ತರಿಸಿದ ಜನರಿಗೆ  ಗ್ಯಾಸ್ ಸಿಲಿಂಡರ್ ಬೆಲೆ 50 ರೂ.ಹೆಚ್ಚಿಸಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ಪರಿಹಾರ ಕಂಡು ಹಿಡಿಯಲು ಬೆಲೆ ಏರಿಕೆ ಸಮಸ್ಯೆಗೆ ಪರಿಹಾರ ಪರಿಹಾರ ಕಂಡು ಹಿಡಿಯಲು ಕಾಂಗ್ರೆಸ್ ಪಕ್ಷ ಕಾಂಗ್ರೆಸ್ ಗ್ಯಾರೆಂಟಿ ಆಶ್ವಾಸನೆಯೊಂದಿಗೆ ಪ್ರತಿ ಮನೆಯ ಯಜಮಾನಿಗೆ ರೂ.2 ಸಾವಿರ ನೀಡುವ ಗೃಹಲಕ್ಷ್ಮೀ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಹಾಗೂ ಪ್ರತಿ ವ್ಯಕ್ತಿಗೆ 10 ಕೆ.ಜಿ ಉಚಿತ ಅಕ್ಕಿ ವಿತರಣೆ ಅನ್ನಭಾಗ್ಯ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಜಾರಿ ಮಾಡಲು ಕೆಪಿಸಿಸಿ ಅಧ್ಯಕ್ಷರಾದ ಡಿ .ಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಸಹಿ ಮಾಡಿದ ಗ್ಯಾರೆಂಟಿ ಕಾರ್ಡ್ ಗಳನ್ನು ವಿತರಿಸಿ ಬೆಲೆ ಏರಿಕೆಯಿಂದ ತತ್ತರಿಸಿದ ಸಾರ್ವಜನಿಕರಿಗೆ ಸ್ಪಂದಿಸಲು ಘೋಷಿಸಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್.ಗಡ್ಡಿ, ಧಾರವಾಡ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಬ್ಯಾಂಕ ಅಧ್ಯಕ್ಷ ಬಾಪುಗೌಡ್ರ ಪಾಟೀಲ, ಕೆ. ಮಾಜಿ ಪಿ.ಸಿ.ಸಿ. ಸದಸ್ಯರಾಜಶೇಖರ ಮೆಣಸಿನಕಾಯಿ, ಜಿಲ್ಲಾ ಸೇವಾದಳದ ಅಧ್ಯಕ್ಷ ಚಂಬಣ್ಣಹಾಳದೋಟರ, ಮಲಪ್ರಬಾ ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಶಿವಾನಂದ ಚಲವಾದಿ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು