ಧಾರವಾಡ: ಡಾ. ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ ಇವರಿಂದ ವರಕವಿ ಡಾ. ದ.ರಾ. ಬೇಂದ್ರೆ ಅವರ 42ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಅಕ್ಟೋಬರ್ 26ರಂದು ಸಂಜೆ 5-30 ಗಂಟೆಗೆ ಸಾಧನಕೇರಿಯ ಡಾ.ದ.ರಾ. ಬೇಂದ್ರೆ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ಕಲಾವಿದ ಪಂ. ಶ್ರೀಪಾದ ಹೆಗಡೆ ಅವರು ಭಾವಗೀತೆ ಗಾಯನ ಪ್ರಸ್ತುತಪಡಿಸುವರು. ತಬಲಾದಲ್ಲಿ ಶ್ರೀಧರ ಮಾಂಡ್ರೆ ಹಾಗೂ ಹಾರ್ಮೊನಿಯಂದಲ್ಲಿ ಗುರುಪ್ರಸಾದ ಹೆಗಡೆ ಸಾಥ್ ನೀಡಲಿದ್ದಾರೆ. ಎನ್.ಎಂ.ಕೆ.ಆರ್ ಮಹಿಳಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಂಧ್ಯಾ ಹೆಗಡೆ ದೊಡ್ಡಹೊಂಡ ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ, ಸದಸ್ಯರುಗಳಾದ ಡಾ. ಕೆ.ಎಸ್. ಶರ್ಮಾ, ಡಾ. ಶ್ಯಾಮಸುಂದರ ಬಿದರಕುಂದಿ, ಡಾ.ಕೆ.ಆರ್. ದುರ್ಗಾದಾಸ್, ಡಾ. ಕೃಷ್ಣ ನಾಯಕ ಹಾಗೂ ಸದಸ್ಯ ಕಾರ್ಯದರ್ಶಿ ಕುಮಾರ್ ಬೆಕ್ಕೇರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.