ಓಪಿಎಸ್ ಜಾರಿ ನಮ್ಮ ಗುರಿ, ನುಡಿದಂತೆ ನಡೆದಿದ್ದೇವೆ ಮತ್ತು ನಡೆಯುತ್ತೇವೆ: ಸಂತೋಷ ಲಾಡ್

ಧಾರವಾಡ: ಸರಕಾರಿ ನೌಕರರು ಸಮಾಜದಲ್ಲಿ ಪ್ರಭಾವಯುತ ಸ್ಥಾನ, ವ್ಯಕ್ತಿತ್ವ ಹೊಂದಿದ್ದು, ಜನರಲ್ಲಿ ಹೆಚ್ಚು ಸಕಾರಾತ್ಮಕತೆ ಬೆಳೆಸಲು ಪ್ರಯತ್ನಿಸಬೇಕು. ರಾಜ್ಯ ಸರಕಾರ ನುಡಿದಂತೆ ನಡೆದಿದ್ದು, ರಾಜ್ಯ ಸರಕಾರಿ ನೌಕರರಿಗೆ ನೀಡಿದ್ದ, ಓಪಿಎಸ್ ಜಾರಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕೆ ಕಾಲವಕಾಶ ಅಗತ್ಯವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರ ಸಂಘದ ಧಾರವಾಡ ಜಿಲ್ಲಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿದರು.

ಪ್ರತಿದಿನ ಒತ್ತಡಗಳಲ್ಲಿ ಕೆಲಸ ಮಾಡುವ ಸರಕಾರಿ ನೌಕರರು ಪ್ರತಿದಿನವೂ ಬಿಡುವು ಮಾಡಿಕೊಂಡು ವ್ಯಾಯಾಮ ಮಾಡುವ ಹವ್ಯಾಸ ರೂಢಿಸಿಕೊಳ್ಳಬೇಕು. ಎಲ್ಲರಿಗೂ ಆರೋಗ್ಯ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಆರೋಗ್ಯ ಅತೀ ಮುಖ್ಯವಾಗಿರುವುದರಿಂದ ವ್ಯಾಯಾಮ, ಕ್ರೀಡೆಗಳ ಮೂಲಕ ಅದನ್ನು ಸದೃಢವಾಗಿ ಕಾಪಾಡಿಕೊಳ್ಳುವುದು ನಮ್ಮ ಜವಾಬ್ದರಿಯಾಗಿದೆ ಎಂದು ಅವರು ಹೇಳಿದರು.

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಜೀವನ ಶೈಲಿ ಮುಖ್ಯವಾಗಿದೆ. ಆಹಾರ, ಓದು, ಸಂಗೀತ, ವಿಹಾರದಂತ ಹವ್ಯಾಸ ಬೆಳೆಸಿಕೊಳ್ಳಬೇಕು. ಮತ್ತು ತಮ್ಮ ಮಕ್ಕಳಲ್ಲಿ ರಾಷ್ಟಭಕ್ತಿ, ನೈತಿಕ ಶಿಕ್ಷಣ ಮೂಡಿಸುವ ಕಾರ್ಯವಾಗಬೇಕು ಎಂದು ಸಚಿವರು ತಿಳಿಸಿದರು.

ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ ಅವರು ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿ ಲವಲವಿಕೆಯಿಂದ ದೈನಂದಿನ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಹೀಗಾಗಿ ಸರಕಾರಿ ನೌಕರರು ಪ್ರತಿದಿನ ಕ್ರೀಡಾ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಸರ್ಕಾರಿ ನೌಕರರು ದಿನನಿತ್ಯ ಕಚೇರಿ ಕೆಲಸ ನಿರ್ವಹಣೆಯಲ್ಲಿ ಅನುಭವಿಸುವ ಒತ್ತಡವನ್ನು ಕಡಿಮೆಗೊಳಿಸಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆ ಇದೆ. ದಿನದಲ್ಲಿ ಒಂದು ಗಂಟೆಯಾದರೂ ವ್ಯಾಯಾಮ ಮಾಡಬೇಕು ಹಾಗೂ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಒತ್ತಡದಿಂದ ಹೊರಬಂದು ಚೈತನ್ಯದಿಂದ ಕೆಲಸ ನಿರ್ವಹಿಸಬಹುದು ಎಂದು ಅವರು ಹೇಳಿದರು.

ಸರಕಾರಿ ಸೇವೆ ಜೀವನದ ಭಾಗ್ಯ; ಸಾರ್ಥಕ ಮಾಡೋಣ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮಾತನಾಡಿ, ಸರಕಾರಿ ನೌಕರರಾಗಿರುವುದು ನಮ್ಮ ಸೌಭಾಗ್ಯ. ಅದನ್ನು ಪ್ರಾಮಾಣಿಕವಾಗಿ, ಜನಪರವಾಗಿ ನಿರ್ವಹಿಸಿ, ಸಾರ್ಥಕಗೊಳಿಸೋಣ ಎಂದು ಹೇಳಿದರು.

ಸರಕಾರದ ಜನಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸುವ ಮಹತ್ವದ ಜವಾಬ್ದರಿ ನಮ್ಮೆಲ್ಲರ ಮೇಲಿದೆ. ಕಳೆದಹೋದ ಕೋವಿಡ್ ಸಂದರ್ಭ ಮತ್ತು ಬಂದಿರುವ ಬರಗಾಲ ಪರಿಸ್ಥಿತಿಯನ್ನು ಧಾರವಾಡ ಜಿಲ್ಲೆಯ ಎಲ್ಲ ಹಂತದ ಸರಕಾರಿ ನೌಕರರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಒತ್ತಡ ಕಳೆದುಹೋಗಿ, ಉತ್ತೇಜನ, ವಿಶ್ರಾಂತಿ ಸೀಗುತ್ತದೆ. ನೌಕರರು ಉತ್ತಮ ಆರೋಗ್ಯಕ್ಕಾಗಿ ಉತ್ತಮ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಸರ್ಕಾರಿ ನೌಕರರು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಬೇಕು. ಸರ್ಕಾರಿ ನೌಕರರ ಮನಸ್ಥಿತಿ ಉತ್ತಮವಾಗಿದ್ದರೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಸರಿಯಾದ ಪರಿಹಾರವನ್ನು ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಪ್ರತಿಯೊಬ್ಬರಿಗೂ ಕಷ್ಟಗಳು ಇರುತ್ತವೆ. ಅದಕ್ಕೆ ಸಮಾಧಾನದಿಂದ ಯೋಚಿಸಿ, ಪರಿಹಾರವನ್ನು ಕಂಡುಕೊಳ್ಳಬೇಕು. ಕಷ್ಟಗಳು ಬಂದಾಗ ಕುಗ್ಗದೆ, ಅದನ್ನು ಧೈರ್ಯದಿಂದ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವಾಧ್ಯಕ್ಷ ರಮೇಶ ಲಿಂಗದಾಳ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಯಡಳ್ಳಿ ವಂದಿಸಿದರು.

ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ರಾಜ್ಯಪರಿಷತ್ ಸದಸ್ಯ ದೇವಿದಾಸ ಶಾಂತಿಕರ, ಹಿರಿಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ, ಖಜಾಂಚಿ ರಾಜಶೇಖರ ಬಾಣದ, ನೌಕರಭವನದ ಕಾರ್ಯದರ್ಶಿ ಗಿರೀಶ ಚೌಡಕಿ, ಕ್ರೀಡಾ ಕಾರ್ಯದರ್ಶಿ ಲಕ್ಷ್ಮಣ ರಜಪೂತ, ಸುರೇಶ ಜಟ್ಟೆನ್ನವರ, ಸಾಂಸ್ಕೃತಿಕ ಕಾರ್ಯದರ್ಶಿ ಪಿ.ಬಿ.ಕುರಬೆಟ್ಟ, ಡಾ.ಬಿ.ಎಚ್.ಕುರಿಯವರ, ತಾಲೂಕು ಘಟಕಗಳ ಅಧ್ಯಕ್ಷರಾದ ಡಾ.ಪ್ರಲ್ಹಾದ ಗೆಜ್ಜಿ, ವ್ಹಿ.ಎಫ್.ಚುಳಕಿ,ಎ.ಬಿ.ಕೊಪ್ಪದ, ರಮೇಶಎಂ.ಹೊಲ್ತಿಕೋಟಿ, ಎಸ್.ಎನ್.ಅರಳಿಕಟ್ಟಿ ಹಾಗೂ ಇತರರು ಇದ್ದರು.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago