ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ಹಿರಿಯ ನ್ಯಾಯಾಧೀಶರಾದ ಪರಶುರಾಮ ಎಫ್ ದೊಡ್ಡಮನಿ ಅವರು ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಅಂಗವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಮಕ್ಕಳ ಆರೋಗ್ಯ ಮತ್ತು ಕ್ಷೇಮವನ್ನು ಹಾಗೂ ಅವರ ಕಾರ್ಯಚಟುವಟಿಕೆಯ ಬಗ್ಗೆ ವಿಚಾರಿಸಿದರು.
ಅವರಿಗೆ ಮಕ್ಕಳಿಗೆ ಯಾವ ರೀತಿಯಲ್ಲಿ ಊಟ ಉಪಚಾರವನ್ನು ಹಾಗೂ ಶಿಕ್ಷಣವನ್ನು ಹಾಗೂ ಅಂಗವಾಡಿಯಲ್ಲಿ ಇರುವ ಸೌಲಭ್ಯಗಳು ಅನುಷ್ಠಾನದ ಬಗ್ಗೆ ವಿಚಾರಿಸಿ ಅಂಗನವಾಡಿ ಕೇಂದ್ರದ ಕಾರ್ಯಕರ್ತರಿಗೆ ಸೂಕ್ತ ಸಲಹೆಯನ್ನು ನೀಡಿ ಇನ್ನುಳಿದ ಸುತ್ತಮುತ್ತ ಶುಚಿತ್ವವನ್ನು ಕಾಪಾಡಿಕೊಮಡು ಹೋಗಲು ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಂಗವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಸಂರ್ದಭದಲ್ಲಿ ಅಂಗವಾಡಿ ಕೇಂದ್ರದ ಕಾರ್ಯಕರ್ತರು ಸಿಬ್ಬಂದಿಗಳು ಇದ್ದರು.