ಹುಬ್ಬಳ್ಳಿ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರು ಈ ಬಾರಿಯೂ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ಸಮಾಜದಲ್ಲಿ ಸಮಾನತೆ ತರಲೆಂದು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ.
ನರೇಂದ್ರ ಮೋದಿಯವರನ್ನು ಮೂರನೇ ಬಾರಿ ಪ್ರಧಾನಿಯನ್ನಾಗಿ ನೋಡಲು ಸಂಕಲ್ಪ ಮಾಡಿ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡರು ಮತ್ತು ಪದಾಧಿಕಾರಿಗಳು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಸಮುದಾಯ ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಪ್ರಧಾನಿ ಮಾಡಲು ಸಂಕಲ್ಪ ತೊಟ್ಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರ ಸುಮಾವೇಶ ಹಮ್ಮಿಕೊಂಡಿದ್ದು, ಅಗತ್ಯ ಸಿದ್ಧತೆ ನಡೆದಿದೆ ಎಂದಿದ್ದಾರೆ.