ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನೆಲೆ ಮಾ. 15ರಂದು ಪ್ರಧಾನಿ ಮೋದಿ ಧಾರವಾಡ ಸೇರಿ ರಾಜ್ಯದ 5 ಕಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಪ್ರಧಾನಿ ಮೋದಿ ಮಾ. 15ರ ಬೆಳಗ್ಗೆ 10 ಗಂಟೆಗೆ ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಅವರನ್ನು ಬರಮಾಡಿಕೊಳ್ಳಲಿದ್ದು, ನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾ.16 ರಂದು ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಮಾ. 17ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದಲ್ಲಿ ಸಭೆ ಆಯೋಜಿಸಲಾಗಿದೆ.
ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದು, ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.