News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರ ಕಿರಿಕ್‌: ಕೇಂದ್ರ ಸಚಿವ ಜೋಶಿ ತರಾಟೆ

Police crackdown on BJP workers: Union Minister Joshi Tarate
Photo Credit : News Kannada

ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತರಿಗೆ ಅನಾವಶ್ಯಕವಾಗಿ ತೊಂದರೆ ನೀಡಿದ ಪೊಲೀಸ್ ಅಧಿಕಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆತ್ತಿಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕ ತೊಂದರೆ ನೀಡುತ್ತಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗರಂ ಆಗಿದ್ದಾರೆ. ಧಾರವಾಡದ ಗೊಲ್ಲರ ಓಣಿ ನಿವಾಸಿ ರವಿ ಗೊಲ್ಲರ ಎಂಬ ಕಟ್ಟಾ ಬಿಜೆಪಿ ಕಾರ್ಯಕರ್ತ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಕೆಲವರ ಮಾತು ಕೇಳಿಕೊಂಡು ಕಾರ್ಯಕರ್ತರ ಮೇಲೆ ತೊಂದರೆ ನೀಡುತ್ತಿದ್ದಾರೆಂದು ಆರೋಪದಡಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಂದೆ ಧಾರವಾಡ ಬಿಜೆಪಿ ಕಾರ್ಯಕರ್ತರುಅಳಲು ತೋಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಧಾರವಾಡದ ಶಹರ ಠಾಣೆಯ ಇನ್ಸ್ ಪೆಕ್ಟರ್ ಕಾಡದೇವರಮಠಗೆ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸುಖಾ ಸುಮ್ಮನೇ ಠಾಣೆಗೆ ಕರೆಸಿ, ಇಲ್ಲಸಲ್ಲದ ಆರೋಪ ಹೊರಿಸಿ ಮನಬಂದಂತೆ ಥಳಿಸಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಜೋಶಿ ಅವರನ್ನು ಭೇಟಿಯಾದ ಕಾರ್ಯಕರ್ತರ ತಂಡ ಬಂದಿದೆ. ಪೊಲೀಸ್ ಅಧಿಕಾರಿ ಕಾಡದೇವರಮಠ ವಿರುದ್ಧ ಕೆಂಡಾಮಂಡಲವಾದ ಜೋಶಿ, ತಮ್ಮ ನಿವಾಸಕ್ಕೆ ಕರೆಸಿ ಬೆವರಿಳಿಸಿದ್ದಾರೆ. ತಪ್ಪು ಮಾಡಿದ್ದರೆ ಶಿಕ್ಷೆ ನೀಡಿ ಅನವಶ್ಯಕವಾಗಿ ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ನೀಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು