News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ದೇಶದಲ್ಲಿ ಶಾಂತಿ ಇರುವ ಕಾರಣಕ್ಕೆ ರಾಮಮಂದಿರ ನಿರ್ಮಾಣವಾಗಿದೆ: ಪ್ರಹ್ಲಾದ್ ಜೋಶಿ

Lok Sabha Elections
Photo Credit : News Kannada

ಹುಬ್ಬಳ್ಳಿ: ದೇಶದಲ್ಲಿ ಶಾಂತಿ ಇರುವ ಕಾರಣಕ್ಕೆ ರಾಮಮಂದಿರ ನಿರ್ಮಾಣವಾಗಿದೆ. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ. ತೀಸ್ರೀ ಬಾರ್ ಮೋದಿ ಸರ್ಕಾರ ಬರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಅವರು ಹುಬ್ಬಳ್ಳಿಯಲ್ಲಿ ನಡೆದ ಗಾಳಿಪಟ ಉತ್ಸವದಲ್ಲಿ ಮಾತನಾಡಿ, ಒಂದು ಕಾಲದಲ್ಲಿ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗಿತ್ತು. ಆದರೆ ಇಂದು ಭಯೋತ್ಪಾದಕರನ್ನು ಹುಡುಕಿ ಹೊಡೆಯುವ ಕೆಲಸವಾಗಿದೆ ಎಂದು ಹೇಳಿದರು.

ಈ ಉತ್ಸವದಲ್ಲಿ ಜೋಶಿ ಪುತ್ರಿ ಅರ್ಪಿತಾ ಜೋಶಿ ಎಲ್ಲರ ಗಮನ ಸೆಳೆದರು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ಸಂಚಿತ್ ಹೆಗಡೆ ಕೂಡ ಭಾಗಿಯಾಗಿದ್ದರು. ಇನ್ನು ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಅರ್ಪಿತಾ ಜೋಶಿ ಅವರು ಹಾಡು ಹಾಡಿ ಜನರನ್ನು ರಂಜಿಸಿದರು. ಮತ್ತೊಂದೆಡೆ ಗಾಳಿಪಟ ಉತ್ಸವದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.,ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು