ಧಾರವಾಡ : ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಉತ್ತಮ ಶಿಕ್ಷಕ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದ್ದಾರೆ.
ಈ ಹಿಂದೆ ಐಐಟಿ ಧಾರವಾಡದಲ್ಲಿ ಎಲೆಕ್ನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ (ಇಇಅಇ) ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಡೀನ್ ಹಾಗೂ ಗುವಾಹಟಿಯ ಐಐಟಿಯ ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ) ಆಗಿದ್ದರು. 2004 ರಲ್ಲಿ ಐಐಟಿ ಮದ್ರಾಸ್ನಿಂದ ಪಿಎಚ್ಡಿ ಪಡೆದಿದ್ದಾರೆ.