ಹುಬ್ಬಳ್ಳಿ: ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣಮೂರ್ತಿ ಪ್ರತಿಷ್ಠಾಪನೆಗೆ ಮೇಯರ್ ಒಪ್ಪಿಗೆ ನೀಡಿದ್ದಾರೆ. ಆದರೆ ಪಾಲಿಕೆ ಆಯುಕ್ತರು ಅನುಮತಿ ನೀಡ್ತಿಲ್ಲ ಎಂದು ಹಿಂದೂಪರ ಸಂಘಟನೆಗಳು ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ, ತಮಟೆ ಬಡೆಯುತ್ತ ವಿಎಚ್ ಪಿ ಕಾರ್ಯಕರ್ತರು ನಿನ್ನೆ ರಾತ್ರಿ ಪ್ರತಿಭಟನೆ ಮಾಡಿದ್ದರು.
ಕಾಮಣ್ಣಮೂರ್ತಿ ಪ್ರತಿಷ್ಠಾಪನೆಗೆ ಮೇಯರ್ ಈರೇಶ ಅಂಚಟಗೇರಿ ಅನುಮತಿ ನೀಡಿದ್ದರು, ಆದರೆ ಪಾಲಿಕೆ ಆಯುಕ್ತರು ಅನುಮತಿ ನೀಡ್ತಿಲ್ಲಾ.ಗಣೇಶ ಮೂರ್ತಿ ಪ್ರತಿಷ್ಠಾಪನೆ, ಟಿಪ್ಪು, ಕನಕ ಜಯಂತಿಗೆ ಅವಕಾಶ ನೀಡಲಾಗಿತ್ತು. ಆದ್ರೆ ಈಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಏಕೆ ಅವಕಾಶ ನೀಡುತ್ತಿಲ್ಲ ಎಂದು ಹಿಂದೂಪರ ಸಂಘಟನೆ ಪ್ರಶ್ನೆ ಮಾಡಿದ್ದಾರೆ.
ಅನುಮತಿ ನೀಡಿದರೆ ಈದ್ಗಾ ಮೈದಾನದ ಆವರಣದೊಳಗೆ ಕೂಡಿಸ್ತೇವೆ. ಇಲ್ಲದಿದ್ದಲ್ಲಿ ಮೈದಾನದ ಹೊರಗಡೆಯೇ ಕಾಮಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಮೂರು ದಿನಗಳ ಕಾಲ ಕಾಮಣ್ಣ ಮೂರ್ತಿ ಕೂಡಿಸುತ್ತೇವೆ ಎಂದು ಹಿಂದೂ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.