News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಟ್ಯಾಬ್ ನೀಡಲು ಸಿಎಂಗೆ ಮನವಿ

Request CM to provide laptops, tabs to degree students
Photo Credit : News Kannada

ನವಲಗುಂದ: ಪಟ್ಟಣದ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ತಮಗೆ ಲ್ಯಾಪ್‌ಟಾಪ್ ಅಥವಾ ಟ್ಯಾಬ್ ನೀಡಲು ತಹಶೀಲ್ದಾರ್ ಸುಧೀರ ಸಾಹುಕಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗ ಸರಕಾರ ಎಲ್ಲಾ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್ ನೀಡುತ್ತಿತ್ತು. ಅವರ ನಂತರ ಬಂದ ಸರಕಾರ ಈ ಸೌಲಭ್ಯ ನಿಲ್ಲಿಸಿದರು. ವಿದ್ಯಾರ್ಥಿಗಳ ಉನ್ನತ ಜ್ಞಾನ ಅಭಿವೃದ್ಧಿಗೊಳಿಸುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಸೌಲಭ್ಯ ಮರಳಿ ಆರಂಭಿಸಬೇಕು ಮತ್ತು 2023-24 ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ವೇಳೆ ಚಂದ್ರಶೇಖರ ಕಂಬಳಿ, ವಿನಾಯಕ ಯಾವಗಲ್, ಕಲ್ಲಪ್ಪ ಮುಧೋಳ, ಪ್ರವೀಣ ಹಿರೇಮಠ, ಸಿದ್ದು ಕಿಲಾರಿ, ಬಾಷಾ ಸನ್ನೂಬಾಯಿ, ವಸಂತ ಚಿಮ್ಮನಕಟ್ಟಿ, ಹನಮಂತ್ತ ತಳವಾರ, ಪ್ರದೀಪ ಕೌಜಗೇರಿ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು