News Karnataka Kannada
Monday, May 06 2024
ಹುಬ್ಬಳ್ಳಿ-ಧಾರವಾಡ

ಈದ್ಗಾ ಮೈದಾನದಲ್ಲಿ 11 ದಿನ ಶ್ರೀ ಗಜಾನನ ಉತ್ಸವ ಆಚರಣೆಗೆ ಅವಕಾಶ ನೀಡಲು ಮನವಿ

Request to allow 11-day Sri Gajanan utsav celebrations at Idgah maidan
Photo Credit : News Kannada

ಹುಬ್ಬಳ್ಳಿ : ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ ಪಾಲಿಕೆಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕಳೆದಬಾರಿ ಹೋರಾಟ ಕೈಗೊಂಡ ಫಲವಾಗಿ ಅನುಮತಿ ದೊರಕಿದೆ.

ಈ ನಿಟ್ಟಿನಲ್ಲಿ ಸರ್ಕಾರ ಗೊಂದಲಕ್ಕೆ ಅವಕಾಶ ಮಾಡಬಾರದು. ಆದ್ದರಿಂದ ಗಣೇಶನ ಪ್ರತಿಷ್ಠಾಪನೆಗೆ ೧೧ ದಿನಗಳವರೆಗೆ ಅವಕಾಶ ನೀಡಬೇಕು. ಹು-ಧಾ ಮಹಾನಗರ ಪಾಲಿಕೆ ನಮಗೆ ೧೫ ದಿನಗಳ ಮುಂಚೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಗಜಾನನ ಉತ್ಸವ ನಿಮಿತ್ತವಾಗಿ ಸಾಂಸ್ಕೃತಿಕ ಮಂಟಪ ಹಾಗೂ ಶ್ರೀ ಗಜಾನನ ಮೂರ್ತಿ ಪ್ರತಿಷ್ಠಾಪನೆಗೆ ಮಂಟಪಗಳಿಗೆ ಪರವಾನಗಿ ನೀಡಬೇಕು. ತಾವು ವಿಧಿಸುವ ಷರತ್ತಿನ ಅನ್ವಯವಾಗಿ ನಾವು ಗಜಾನನ ಉತ್ಸವ ಆಚರಣೆಗೆ ನಾವು ಬದ್ಧರಾಗಿದ್ದೇವೆ ಎಂದರಲ್ಲದೇ, ಮೂರುಸಾವಿರಮಠದ ಸ್ವಾಮೀಜಿ ಹಾಗೂ ಉಳಿದ ಗಣೇಶ ಸಮಿತಿ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿ, ಗಜಾನನ ಉತ್ಸವದ ಕುರಿತಂತೆ ಪೂರ್ವಭಾವಿಯಾಗಿ ಚರ್ಚಿಸಲಾಗುವುದು ಎಂದರು.

ನಂತರ ಮಾತನಾಡಿದ ರಾಜಶ್ರೀ ಜಡಿ, ಐದು ದಿನಗಳವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ನಂತರದ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಹೊಂದಿದ್ದು, ಇದು ಸಾರ್ವಜನಿಕರ ಅಪೇಕ್ಷೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ಚನ್ನಬಸಪ್ಪ ಧಾರವಾಡಶೆಟ್ಟರ್, ಮಹೇಶ್ ಶೇಟ್, ವಸಂತ ನಿರಂಜನ, ವೆಂಕಟೇಶ ನಿರಂಜನ, ರಾಘವೇಂದ್ರ ಬಸವಾ, ಜಯದೇವ ಪವಾರ್, ವಿಷ್ಣು ಸರ್ವದೆ ಸೇರಿದಂತೆ  ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು