ಹುಬ್ಬಳ್ಳಿ : ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ ಪಾಲಿಕೆಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕಳೆದಬಾರಿ ಹೋರಾಟ ಕೈಗೊಂಡ ಫಲವಾಗಿ ಅನುಮತಿ ದೊರಕಿದೆ.
ಈ ನಿಟ್ಟಿನಲ್ಲಿ ಸರ್ಕಾರ ಗೊಂದಲಕ್ಕೆ ಅವಕಾಶ ಮಾಡಬಾರದು. ಆದ್ದರಿಂದ ಗಣೇಶನ ಪ್ರತಿಷ್ಠಾಪನೆಗೆ ೧೧ ದಿನಗಳವರೆಗೆ ಅವಕಾಶ ನೀಡಬೇಕು. ಹು-ಧಾ ಮಹಾನಗರ ಪಾಲಿಕೆ ನಮಗೆ ೧೫ ದಿನಗಳ ಮುಂಚೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಗಜಾನನ ಉತ್ಸವ ನಿಮಿತ್ತವಾಗಿ ಸಾಂಸ್ಕೃತಿಕ ಮಂಟಪ ಹಾಗೂ ಶ್ರೀ ಗಜಾನನ ಮೂರ್ತಿ ಪ್ರತಿಷ್ಠಾಪನೆಗೆ ಮಂಟಪಗಳಿಗೆ ಪರವಾನಗಿ ನೀಡಬೇಕು. ತಾವು ವಿಧಿಸುವ ಷರತ್ತಿನ ಅನ್ವಯವಾಗಿ ನಾವು ಗಜಾನನ ಉತ್ಸವ ಆಚರಣೆಗೆ ನಾವು ಬದ್ಧರಾಗಿದ್ದೇವೆ ಎಂದರಲ್ಲದೇ, ಮೂರುಸಾವಿರಮಠದ ಸ್ವಾಮೀಜಿ ಹಾಗೂ ಉಳಿದ ಗಣೇಶ ಸಮಿತಿ ಪದಾಧಿಕಾರಿಗಳ ಜೊತೆಗೆ ಸಭೆ ನಡೆಸಿ, ಗಜಾನನ ಉತ್ಸವದ ಕುರಿತಂತೆ ಪೂರ್ವಭಾವಿಯಾಗಿ ಚರ್ಚಿಸಲಾಗುವುದು ಎಂದರು.
ನಂತರ ಮಾತನಾಡಿದ ರಾಜಶ್ರೀ ಜಡಿ, ಐದು ದಿನಗಳವರೆಗೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ನಂತರದ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಹೊಂದಿದ್ದು, ಇದು ಸಾರ್ವಜನಿಕರ ಅಪೇಕ್ಷೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಚನ್ನಬಸಪ್ಪ ಧಾರವಾಡಶೆಟ್ಟರ್, ಮಹೇಶ್ ಶೇಟ್, ವಸಂತ ನಿರಂಜನ, ವೆಂಕಟೇಶ ನಿರಂಜನ, ರಾಘವೇಂದ್ರ ಬಸವಾ, ಜಯದೇವ ಪವಾರ್, ವಿಷ್ಣು ಸರ್ವದೆ ಸೇರಿದಂತೆ ಉಪಸ್ಥಿತರಿದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…