ಹುಬ್ಬಳ್ಳಿ: ಸುಲಿಗೆ, ದರೋಡೆ ಮಾಡುತ್ತಿದ್ದ ರೌಡಿಶೀಟರ್ನ ಗಡಿಪಾರು ಮಾಡಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಆದೇಶ ಹೊರಡಿಸಿದೆ.
ಅವಳಿನಗರ ವ್ಯಾಪ್ತಿಯಲ್ಲಿ ರೌಡಿಸಂ ಚಟುವಟಿಕೆಗಳಲ್ಲಿ ಭಾಗಿಯಾದ ರೌಡಿಗಳ ವಿರುದ್ಧ ಗಡಿಪಾರು ಮಾಡುವಂತಹ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಓರ್ವ ರೌಡಿಶೀಟರ್ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಸುಮಾರು ದಿನಗಳಿಂದ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಹಳೇಹುಬ್ಬಳ್ಳಿ ಶಿವಶಂಕರ ಕಾಲೋನಿಯ ನಿವಾಸಿಯಾಗಿರುವ 25 ವರ್ಷದ ಅರ್ಜುನ ಪರಶುರಾಮ ಬುಗಡಿ, ಎಂಬಾತನನ್ನು ದಿನಾಂಕ 28.02.2024 ರಿಂದ 06 ತಿಂಗಳ ಅವಧಿಗೆ ತುಮಕೂರು ಜಿಲ್ಲೆಯ ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ರೌಡಿಶೀಟರ್ನು ಆಟೋ ರಿಕ್ಷಾ ಓಡಿಸುತ್ತ ತನ್ನದೇ ಗುಂಪು ಕಟ್ಟಿಕೊಂಡು ಜನರಿಗೆ ಬೆದರಿಸಿ ಹಲ್ಲೆ ಮಾಡಿ ಸುಲಿಗೆ ಮಾಡುವುದು, ರಾತ್ರಿ ವೇಳೆ ಸಂಚರಿಸುವ ಲಾರಿ ಮತ್ತು ವಾಹನಗಳನ್ನು ತಡೆದು ಚಾಲಕರ ಮೇಲೆ ಹಲ್ಲೆ ಮಾಡಿ ದರೋಡೆ ಮಾಡುವುದು, ರೌಡಿಸಂ ತೋರಿಸುತ್ತ ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸುವಂತಹ ಪ್ರವೃತ್ತಿಯನ್ನು ಹೊಂದಿದ್ದು, ಅವನ ಮೇಲೆ ಈಗಾಗಲೇ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಈತನ ಮೇಲೆ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸಹ ತೆರೆಯಲಾಗಿರುತ್ತದೆ. ಆದರೂ ತನ್ನ ವರ್ತನೆ ಸುಧಾರಿಸಿಕೊಳ್ಳದೇ ಮತ್ತೆ ಸುಲಿಗೆ, ದರೋಡೆಗಳಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರೆಸಿದ್ದ ಈತನ ಮೇಲೆ ತೀವ್ರ ನಿಗಾ ಇಡಲಾಗಿತ್ತು. ಈ ನಿಟ್ಟಿನಲ್ಲಿ ಗಡಿಪಾರು ಮಾಡಿ ಪೊಲೀಸ್ ಕಮೀಷನರೇಟ್ ಆದೇಶ ಹೊರಡಿಸಿದೆ.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…