ಹುಬ್ಬಳ್ಳಿ: ಹುಬ್ಬಳ್ಳಿಯ ಅತಿ ಹೆಚ್ಚು ವ್ಯಾಪಾರಗಳು ಈ ಜನತಾ ಬಜಾರ್ನಲ್ಲಿ ಆಗುತ್ತಿವೆ. ಇದನ್ನು ನವೀಕರಿಸಿದ್ದು ಹುಬ್ಬಳ್ಳಿಯ ಜನತೆಗೆ ತುಂಬಾ ಉಪಯುಕ್ತವಾಗಿದೆ. ಇಂದಿನಿಂದ ಈ ಬಜಾರ್ ಬಳಕೆಗೆ ಮುಕ್ತವಾಗಿದ್ದು, ಜನರು ಮೊದಲಿನಂತೆ ಇಲ್ಲಿ ವ್ಯಾಪಾರ ವ್ಯವಹಾರಗಳನ್ನು ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆ ಅಡಿ ಹುಬ್ಬಳ್ಳಿಯಲ್ಲಿ 18.50 ಕೋಟಿ ವೆಚ್ಚದಡಿ ನವೀಕರಣಗೊಂಡ ಜನತಾ ಬಜಾರ್ ಮಾರುಕಟ್ಟೆಯನ್ನು ಇಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೋಕಾರ್ಪಣೆಗೊಳಿಸಿದರು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಶಾಸಕ ಪ್ರಸಾದ ಅಬ್ಬಯ್ಯ, ಪಾಲಿಕೆಯ ಸದಸ್ಯರು, ಸ್ಮಾರ್ಟ್ ಸಿಟಿ ಸದಸ್ಯರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.