ಧಾರವಾಡ: ಪ್ರಮುಖ ಧಾರ್ಮಿಕ ಕ್ಷೇತ್ರ ಅಯೋಧ್ಯೆಯಲ್ಲಿ ಕೆಲವೇ ದಿನಗಳಲ್ಲಿ ರಾಮ ಮಂದಿರ ಲೋಕಾರ್ಪಣೆಗೊಳ್ಳಲಿದ್ದು, ಜನವರಿ 22 ರಂದು ಶ್ರೀ ರಾಮನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ.
ಈಗಾಗಲೇ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗಾಗಿ ದೇಶದ ಮೂಲೆ ಮೂಲೆಗಳಿಂದ ಬಗೆ ಬಗೆ ವಸ್ತುಗಳು ಹೋಗುತ್ತಿವೆ. ಧಾರವಾಡದಲ್ಲಿ ಶ್ರೀರಾಮ ಚಂದ್ರನಿಗಾಗಿಯೇ ವಿಶೇಷವಾಗಿ ತಯಾರಿಸಲಾದ ಕಂಬಳಿಗಳು ಅಯೋಧ್ಯೆಗೆ ಹೊರಟಿವೆ.
ಧಾರವಾಡದ ರೈತರ ಓಣಿ ಎಂದೇ ಕರೆಯಲಾಗುವ ಕಮಲಾಪುರ ಬಡಾವಣೆಯ ಸುಭಾಷ ರಾಯಣ್ಣವರ ಅವರು ಮೂರು ತಲೆಮಾರುಗಳಿಂದ ಕಂಬಳಿ ಕಟ್ಟುತ್ತಾ ಬಂದಿದ್ದಾರೆ. ಇದೀಗ ಸುಭಾಷ್ ಅವರು ಅಯೋಧ್ಯೆಗೆ ಕಳುಹಿಸಲೆಂದೇ ಎರಡು ಕಂಬಳಿಗಳನ್ನು ತರಯಾರು ಮಾಡಿದ್ದಾರೆ. ಅಲ್ಲದೇ ಅವುಗಳನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೂಲಕ ಅಯೋಧ್ಯೆಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಿದ್ದಾರೆ.