News Karnataka Kannada
Tuesday, May 14 2024
ಹುಬ್ಬಳ್ಳಿ-ಧಾರವಾಡ

ಪತಿಯ ಪರ ಪತ್ನಿ ಶಿವಲೀಲಾ ಕುಲಕರ್ಣಿ ನಾಮಪತ್ರ ಸಲ್ಲಿಕೆ : ಶೆಟ್ಟರ್ ಸಾಥ್

Shivleela Kulkarni files nomination for husband's behalf: Shettar
Photo Credit : News Kannada

ಹುಬ್ಬಳ್ಳಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದು, ಇಂದು ಅವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಶಕ್ತಿ ಪ್ರದರ್ಶನದೊಂದಿಗೆ ಅಧಿಕೃತವಾಗಿ ವಿನಯ್ ಅವರ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅದರ ಜೊತೆಗೆ ಮಾಜಿ‌ ಸಿಎಂ ಜಗದೀಶ್ ಶೆಟ್ಟರ್ ಸಾಥ್ ನೀಡಿದರು.

ಧಾರವಾಡದ ಪ್ರಸಿದ್ಧ ಮುರುಘಾಮಠದಿಂದ ಮೆರವಣಿಗೆ ಮೂಲಕ ಧಾರವಾಡದ ಉಪವಿಭಾಗಾಧಿಕಾರಿ ಕಚೇರಿಗೆ ಬಂದ ಶಿವಲೀಲಾ ಅವರು, ವಿನಯ್ ಅವರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಲಕ್ಷಾಂತರ ಜನ ಆಗಮಿಸಿದರು. ಈ ರ್ಯಾಲಿ ಯಲ್ಲಿ ವಿನಯ್ ಅವರ ಮಕ್ಕಳಾದ ವೈಶಾಲಿ, ದೀಪಾಲಿ ಹಾಗೂ ಹೇಮಂತ್ ಅವರು ಪಾಲ್ಗೊಂಡು ಜನರತ್ತ ಕೈಬೀಸಿ ತಮ್ಮ ತಂದೆಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ತೆರೆದ ವಾಹನದ ಮೂಲಕ ಶಿವಲೀಲಾ ಅವರು ಮೆರವಣಿಗೆ ನಡೆಸಿದರು. ವಿನಯ್ ಅವರ ಅಭಿಮಾನಿಗಳು ತೆರೆದ ವಾಹನದ ಮೇಲಿದ್ದ ನಾಯಕರ ಮೇಲೆ ಹೂಮಳೆಗರೆದರು. ಅಲ್ಲದೇ ಕ್ರೇನ್ ಮೂಲಕ ಮಾಲಾರ್ಪಣೆ ಕೂಡ ಮಾಡಿದರು. ಶಿವಲೀಲಾ ಅವರು ಉಪವಿಭಾಗಾಧಿಕಾರಿ ಕಚೇರಿಗೆ ನಾಮಪತ್ರ ಸಲ್ಲಿಸಲು ಬಂದ ವೇಳೆ ಮಾಜಿ ಸಚಿವ ಹಾಗೂ ಕಲಘಟಗಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಕೂಡ ಅವರಿಗೆ ಸಾಥ್ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು