ಬಡತನಕ್ಕೆ ಸವಾಲು ಎಸೆದು ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾದ ಸಿದ್ದಲಿಂಗಪ್ಪ

ಧಾರವಾಡ : ಬಡತನದಲ್ಲಿ ಬೆಂದಿದ್ದ ವ್ಯಕ್ತಿ ಇದೀಗ ಧಾರವಾಡಕ್ಕೆ ಕೀರ್ತಿ ತಂದ ಯುವಕ. ಈತ ಇತ್ತ ಕುಟುಂಬಕ್ಕೆ ನೆರವಾಗಿ ತನ್ನ ವಿದ್ಯಾಭ್ಯಾಸಕ್ಕೆ ಮನಸ್ಸು‌ ಕೊಟ್ಟು ಎಲ್ಲರ ಬಾಯಿಯಲ್ಲಿ ಶಯಬ್ಬಾಸ್ ಅನಿಸ್ಸಿಕೊಂಡಿದ್ದಾರೆ. ಮನಸ್ಸಿದ್ದರೆ ಮಾರ್ಗ ಎಂಬುವುದಕ್ಕೆ ಸಿದ್ದಲಿಂಗಪ್ಪ ಪೂಜಾರ ಸೂಕ್ತ ಉದಾಹರಣೆ. ಬಡತನಕ್ಕೆ ನಾಚಿಕೆ ಬರುವಂತೆ ವಿದ್ಯಾಭ್ಯಾಸ ಮಾಡಿ ಎಲ್ಲರಿಗೂ ಮಾರ್ಗದರ್ಶನವಾಗಿದ್ದಾನೆ.

ಪ್ರತಿಭಾವಂತ ವಿದ್ಯಾರ್ಥಿ ಸಿದ್ದಲಿಂಗಪ್ಪ ಪೂಜಾರ ಧಾರವಾಡ ತಾಲೂಕಿನ ಅಣ್ಣಿಗೇರಿ ಪಟ್ಟಣದ ನಿವಾಸಿ. 589 ಅಂಕಗಳನ್ನು ಪಡೆಯುವ ಮೂಲಕ ಯುಪಿಎಸ್‌ಸಿ ಎಕ್ಸಾಮ್ ನಲ್ಲಿ ತೇರ್ಗಡೆಯಾಗಿ ರಾಜ್ಯಕ್ಕೆ ಮತ್ತು ಅಣ್ಣಿಗೇರಿ ಪಟ್ಟಣಕ್ಕೆ ಕೀರ್ತಿ ತಂದಿದ್ದಾನೆ. ಇನ್ನೂ ಇವನ ಸಾಧನೆಗೆ ಅಣ್ಣಿಗೇರಿ ಪಟ್ಟಣವೇ ಹೆಮ್ಮೆ ಪಡುವಂತಾಗಿದೆ.

ಸಿದ್ದಲಿಂಗಪ್ಪ ಬಿ ಇ‌ ಎಲೆಕ್ಟ್ರಾನಿಕ್ಸ್ ಮುಗಿಸಿ ಬೆಂಗಳೂರಿನ ಖಾಸಗಿ‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವರ್ಷ ಮದುವೆಯಾಗಿರುವ ಸಿದ್ದಲಿಂಗಪ್ಪ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.ಕನ್ನಡ ಮಾಧ್ಯಮದಲ್ಲಿ ಓದಿರೋ ಸಿದ್ದಲಿಂಗಪ್ಪ ಅವರು ಬಡತನದಲ್ಲಿ ಓದಿ ದೇಶದ ಅತ್ಯುನ್ನತ ಪರೀಕ್ಷೆ ಪಾಸ್ ಮಾಡಿದ್ದಾರೆ.

ತಾಯಿ ಹೊಲಮನಿ‌ ಕೆಲಸ ಮಾಡುತ್ತೀದ್ದಾರೆ. ತಂದೆ ಕೆಎಸ್ಸಾರ್ಟಿಸಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗನ ಸಾಧನೆಗೆ ತಾಯಿಗೆ ಮಾತು ಬರದಂತಾಗಿದೆ. “ಒಟ್ಟು ವಿದ್ಯಾಭ್ಯಾಸ ಮಾಡುತ್ತೀದ್ದಾ ಅದು ಎನ್ನು ಓದುತ್ತೀದ್ದಾ ನನ್ನಗೂ ಗೊತ್ತಿಲ್ಲಾ, ಆದ್ರೆ ತುಂಬಾ ಸಂತೋಷ ವಾಗಿದೆ. ದೊಡ್ಡ ಪರೀಕ್ಷೆ ಬರೆದು ಹುಬ್ಬಳಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ನಮ್ಮ ಮಗ ಅತ್ಯಂತ ದೊಡ್ಡ ಪರೀಕ್ಷೆಯಲ್ಲಿ ಪಾಸ ಆಗಿದ್ದಾನೆ. ಅವನು ಇಷ್ಟು ದೊಡ್ಡ ಪರೀಕ್ಷೆಯಲ್ಲಿ ಪಾಸ್ ಆಗುತ್ತಾನೆ ಎಂದು ನಿರೀಕ್ಷೆ ಇರಲಿಲ್ಲ ” ಎಂದು ಮಗನ ಸಾಧನೆ ತಾಯಿ ಖುಷಿ ಹಂಚಿಕೊಂಡಿದ್ದಾರೆ

ಸಿದ್ದಲಿಂಗಪ್ಪ ಅವರದ್ದು ಬಡ ಕುಟುಂಬ. ಈಗಲೂ ತಗಡಿನ ಶೆಡ್ಡಿನ ಮನೆಯಲ್ಲಿಯೇ ವಾಸವಾಗಿದ್ದಾರೆ. ಸಿದ್ದಲಿಂಗಪ್ಪ IAS ಪಾಸ್ ಆಗಿದಕ್ಕೆ ಇಡೀ ಏರಿಯಾದ ಜನರು ಸಿದ್ದಲಿಂಗಪ್ಪ ತಾಯಿಗೆ ಸಕ್ಕರೆ ನೀಡಿ ಶುಭಾಶಯ ಕೋರಿದರು.

Sneha Gowda

Recent Posts

ನಿಯಂತ್ರಣ ಕಳೆದುಕೊಂಡ ‘ಅಮಿತ್ ಶಾ’ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ…

5 mins ago

ಮುರುಘಾ ಸ್ವಾಮೀಜಿ ಮತ್ತೆ ಜೈಲಿಗೆ : ಮೇ 27ರವರೆಗೆ ನ್ಯಾಯಾಂಗ ಬಂಧನ

ಮುರುಘಾ ಮಠದ ವಸತಿ ಶಾಲ ವಿದ್ಯಾರ್ಥಿನಿಯರ ಮೇಲಿನ ಅತ್ಯಚಾರ ಪ್ರಕರಣದಲ್ಲಿ ಜಾಮನೀನು ಪಡೆದು ಹೊರ ಬಂದಿದ್ದ ಮುರುಘಾ ಶ್ರೀಗಳಿಗೆ ಪುನಃ…

15 mins ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

43 mins ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

1 hour ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

2 hours ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

2 hours ago