ಹುಬ್ಬಳ್ಳಿ: ಸಿದ್ದರಾಮಯ್ಯ ಸಹಜ ನನ್ನ ಟಾರ್ಗೆಟ್ ಮಾಡೋದು. ಅವರ ವೋಟ್ ಬ್ಯಾಂಕ್ ಛಿದ್ರ ಆಗಿದೆ. ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಇದೆ. 8 ಸಾವಿರ ಕೋಟಿ ಭ್ರಷ್ಟಾಚಾರ ಆರೋಪ ಇದೆ. ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆದರ್ಶ ನಗರದ ಬಳಿ ವಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರ ವೋಟ್ ಬ್ಯಾಂಕ್ ಎಸ್ ಸಿ ಎಸ್ ಟಿ ಅವರ ಕಾಲ ಕೆಳಗೆ ಇದ್ದ ವೋಟ್ ಸರಿದು ಹೋಗಿದೆ. ಹಾಗಾಗಿ ನನ್ನ ಟಾರ್ಗೆಟ್. ಡ್ಯಾಂ ಒಡೆದಿದ್ದು ಕಾಂಗ್ರೆಸ್ ದು . ಎಸ್ ಸಿ ಎಸ್ ಟಿ ಒಬಿಸಿ ವೋಟ್ ಅವರ ಕೈ ತಪ್ಪಿ ಅವರ ಡ್ಯಾಂ ಒಡೆದಿದೆ. ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡ್ತೀದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳದೀದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳದಿದ್ದಾರೆ. ನನ್ನ ಮೇಲೆ ಭ್ರಷ್ಟಾಚಾರ ಆರೋಪ ಏನಾದರೂ ಇದ್ರೆ ಹೇಳಲಿ ತನಿಖೆ ಮಾಡಿಸೋಣ ಎಂದರು.