News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಮುಖ್ಯಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಸಿದ್ದರಾಮಯ್ಯ ಎಂದ ಪ್ರಹ್ಲಾದ್ ಜೋಶಿ

Pralahad Joshi
Photo Credit :

ಧಾರವಾಡ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಕನಸು ಕಾಣಲು ಅಧಿಕಾರವಿದೆ. ತಿರುಕನೋರ್ವ ಮನೆ ಮುಂದೆ ಕನಸು ಕಂಡ ಎಂಬ ಹಾಡಿದೆ, ಇದು ಕೂಡ ಹಾಗೆಯೇ ಆಗಿದೆ. ಹಾಗಂತ ನಾನು ಅವರನ್ನು ತಿರುಕರು ಅಂತಾ ಹೇಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಲ್ಲ, ಆ ಪಕ್ಷ ಭೂತಕಾಲದ ಪಕ್ಷವಾಗುತ್ತಿದೆ ಎಂದು ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ.

ಕನಸು ಕಾಣಲು ತಿರುಕನಿಗೂ ಅಧಿಕಾರವಿದೆ. ಸಿದ್ದರಾಮಯ್ಯ ಬಹಳ ದೊಡ್ಡವರು. ಈ ಹಿಂದೆ ಅವರು ಮುಖ್ಯಮಂತ್ರಿ  ಆಗಿದ್ದವರು. ಹೀಗಾಗಿ ಮುಂದೆ ಸರ್ಕಾರ ಬರುತ್ತದೆ ಅಂತಾ ಕನಸು ಕಾಣಲು ಅವರಿಗೆ ಅಧಿಕಾರವಿದೆ. ಅದನ್ನು ನನಸು ಮಾಡುವವರು ಮಾತ್ರ ಜನರು. ಆದರೆ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಲ್ಲ, ಆ ಪಕ್ಷವು ಭೂತಕಾಲದ ಪಕ್ಷ ಆಗುತ್ತಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು