ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಿಸಲಾಯಿತು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕುರುಬ ಸಮಾಜದಿಂದ ಸಂಜಯ ದುಮ್ಮಕನಾಳ ಹಾಗೂ ಅಭಿಮಾನಿಗಳು ವಿಜಯೋತ್ಸವ ಆಚರಿಸಿದರು. ನಂತರ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ವೇಳೆ ಡೊಳ್ಳು ಬಾರಿಸಿ, ಡ್ಯಾನ್ಸ್ ಮಾಡಿದ ಅಭಿಮಾನಿಗಳು, ಸಿದ್ದರಾಮಯ್ಯ ಸರ್ಕಾರ ಐದು ವರ್ಷಗಳ ಪೂರ್ಣಾವಧಿ ಪೂರೈಸಿ, ಬಡವರ ಕಣ್ಣೀರುಒರೆಸಲಿ ಎಂದು ಹಾರೈಸಿದರು.