ಧಾರವಾಡ: ಸೌಜನ್ಯ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಅಗ್ರಹಿಸಿ ಧಾರವಾಡ ಡಿಸಿ ಕಚೇರಿ ಮುಂಭಾಗದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ ನಡೆಸಲಾಯಿತು.
ಆರೋಪಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸೌಜನ್ಯ ಪ್ರಕರಣ ನಡೆದು 11 ವರ್ಷ ಕಳೆಯುತ್ತಾ ಬಂದಿದೆ ಆದರೆ ಇನ್ನೂ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಸೌಜನ್ಯ ಹೆಣ್ಣು ಮಗಳನ್ನು ಧರ್ಮಸ್ಥಳದಿಂದ ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಹೈಕೋರ್ಟ್ ನ್ಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ ಮರು ತನಿಖೆ ಮಾಡಬೇಕು. ಈ ಕುರಿತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಇಲ್ಲವಾದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.