ಧಾರವಾಡ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಧಾರವಾಡ ನಗರದ ಆಲೂರು ವೆಂಕಟರಾವ್ ವೃತ್ತದ ಬಳಿಯ ಶಿಕ್ಷಕರ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಪೋಷಕರು ಧರ್ಮಾತೀತವಾಗಿ ಭಾಗವಹಿಸಿ ಹಬ್ಬವನ್ನು ಸಂಭ್ರಮಿಸಿದ್ದಾರೆ.
ಶ್ರೀಕೃಷ್ಣನ ಲೀಲೆಗಳಿಗೆ ಧಾರವಾಡದ ಮುಸ್ಲಿಂ ಸಮಾಜದ ಭಾಂದವರು ಕೂಡ ಮಾರು ಹೋಗಿದ್ದು, ಸರ್ಕಾರಿ ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಿದ್ದಾರೆ.
ಈ ಶಾಲೆಯ ವಿಶೇಷವೇನೆಂದರೆ, ಶಾಲೆಯಲ್ಲಿ 1ರಿಂದ 8 ನೇ ತರಗತಿಯವರೆಗೆ 320 ಬಾಲಕಿಯರು ಓದುತ್ತಿದ್ದಾರೆ. ಈ ಪೈಕಿ ಶೇ. 60 ರಷ್ಟು ಬಾಲಕಿಯರು ಮುಸ್ಲಿಂ ಸಮುದಾಯಕ್ಕೆ ಸೇರಿದ್ದಾರೆ. ಮುಸ್ಲಿಂ ವಿದ್ಯಾರ್ಥಿಗಳು ಕೃಷ್ಣ ಹಾಗು ರಾಧೆಯ ವೇಷ ತೊಟ್ಟು ಗಮನ ಸೆಳೆದಿದ್ದಾರೆ. ಶ್ರೀಕೃಷ್ಣ-ರಾಧೆಯರ ವೇಷ ತೊಟ್ಟು ತಮ್ಮ ಪೋಷಕರೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿಯಲ್ಲಿ ಸಂಭ್ರಮದಿಂದ ಭಾಗಿಯಾಗಿದ್ದರು.