News Karnataka Kannada
Wednesday, May 08 2024
ಹುಬ್ಬಳ್ಳಿ-ಧಾರವಾಡ

ಹುಚ್ಚಪ್ಪಜ್ಜನ ಕೆರೆಯ ಅಂಗಳದಲ್ಲಿ ಮತದಾನ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮ

ಮತದಾನ ಜಾಗೃತಿಗಾಗಿ ಮಾದನಬಾವಿ ಗ್ರಾಮದ ಹುಚ್ಚಪ್ಪಜ್ಜನ ಕೆರೆಯ ಅಂಗಳದಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯಿತು.
Photo Credit : NewsKarnataka

ಧಾರವಾಡ : ಮತದಾನ ಜಾಗೃತಿಗಾಗಿ ಮಾದನಬಾವಿ ಗ್ರಾಮದ ಹುಚ್ಚಪ್ಪಜ್ಜನ ಕೆರೆಯ ಅಂಗಳದಲ್ಲಿ ಸ್ವೀಪ್ ಕಾರ್ಯಕ್ರಮ ನಡೆಯಿತು.

ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಕೆಲಸಕ್ಕೆ ಆಗಮಿಸಿದ್ದ ಮಾದನಬಾವಿ ಗ್ರಾಮದ ಸುಮಾರು 200 ಜನ ಪುರುಷ ಮತ್ತು ಮಹಿಳಾ ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವ ತಿಳಿಸಲಾಯಿತು. ಜಿಲ್ಲಾ ಸ್ವೀಪ್ ನೂಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ ಅವರು ಮಾತನಾಡಿ, ಮೇ 7 ರಂದು ಎಲ್ಲರೂ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಬೇಕೆಂದು ತಿಳಿಸಿದರು.

Vot 1

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ ಅವರು ಮಾತನಾಡಿ, ನರೇಗಾ ಯೋಜನೆಯಡಿ ಹೆಣ್ಣು- ಗಂಡು ಎಂಬ ಬೇಧವಿಲ್ಲ. ಎಲ್ಲರೂ ಸಮಾನರು ಮತ್ತು ಎಲ್ಲರಿಗೂ ಸಮಾನ ವೇತನವಿದೆ. ಅದರಂತೆ ಮತದಾನದಲ್ಲಿಯೂ ಪುರುಷ ಮತ್ತು ಮಹಿಳೆಗೆ ಸಮಾನ ಹಕ್ಕಿದೆ. ಇಬ್ಬರೂ ಮತಗಟ್ಟೆಗೆ ಬಂದು ಮತದಾನ ಮಾಡಬೇಕೆಂದು ತಿಳಿಸಿದರು.

ನರೇಗಾ ಕೂಲಿ ಕಾರ್ಮಿಕರು ಮತದಾನ ಜಾಗೃತಿ ಮತ್ತು ನರೇಗಾ ಯೋಜನೆಯ ಪ್ಲೇ ಕಾರ್ಡ್ ಗಳನ್ನು ಕೈಯಲ್ಲಿ ಹಿಡಿದು ಮತದಾನ ಜಾಗೃತಿ ಕುರಿತು ಘೋಷಣೆ ಕೂಗಿದರು. ನೆರೆದ ಎಲ್ಲರಿಗೂ ತರಬೇತಿದಾರ ಕೆ.ಎಂ. ಶೇಖ ಅವರು ಮತದಾರ ಪ್ರತಿಜ್ಞಾವಿಧಿ ಬೋಧಿಸಿದರು. ನರೇಗಾ ಧಾರವಾಡ ತಾಲೂಕು ಸಹಾಯಕ ನಿರ್ದೇಶಕ ಚಂದ್ರು ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು