ಹುಬ್ಬಳ್ಳಿ: ನಾನು ಬಿಜೆಪಿಯಲ್ಲಿ ಮುಂದುವರಿದರೆ ನಂಬರ್ ಒನ್ ನಾಯಕನಾಗುತ್ತಿದ್ದೆ, ಪ್ರತಿಸ್ಪರ್ಧಿ ಆಗುತ್ತೇನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಬಿ.ಎಲ್ ಸಂತೋಷ್ ಷಡ್ಯಂತ್ರ ಮಾಡಿದರು ಎಂದು ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಲಿಂಗಾಯತ ನಾಯಕತ್ವವಿಲ್ಲದೆ ಸರ್ಕಾರ ರಚಿಸಿದ್ದನ್ನು ತೋರಿಸಬೇಕಿತ್ತು. ಆ ಹಿನ್ನೆಲೆಯಲ್ಲಿ ಇದೆಲ್ಲ ನಡೆಯುತ್ತಿದೆ ಎಂದ ಜಗದೀಶ್ ಶೆಟ್ಟರ್, ಶೆಟ್ಟರ್ ನಾಯಕತ್ವ ಕ್ಲೋಸ್ ಮಾಡಲು ಷಡ್ಯಂತ್ರ ನಡೆಯುತ್ತಿತ್ತು. ಕೆಲವರಿಗೆ ಅಡ್ಡಿ ಆಗುತ್ತೇನೆ ಅಂತಾ ನನ್ನ ವಿರುದ್ಧ ನೆಗೆಟಿವ್ ಪ್ರಚಾರ ನಡೆಸಿದರು.
ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಬಿ.ಎಲ್.ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಇದೆಲ್ಲ ಆಗುತ್ತಿದೆ. ಇಡೀ ದೇಶದಲ್ಲಿ ಬಿ.ಎಲ್.ಸಂತೋಷ್ ವಿರುದ್ಧ ಮಾತಾಡಿದ್ದು ನಾನೆ. ನನಗೆ ಆದ ಅನ್ಯಾಯ ತೇಜಸ್ವಿನಿ ಅನಂತಕುಮಾರ್ಗೂ ಆಗಿದೆ. ತೇಜಸ್ವಿನಿಗೂ ಟಿಕೆಟ್ ಕೈತಪ್ಪಲು ಬಿ.ಎಲ್.ಸಂತೋಷ್ ಕಾರಣ. ಬಿಜೆಪಿಯಲ್ಲಿ ಲಿಂಗಾಯತ ನಾಯಕತ್ವ ಮುಗಿಸುವ ಹುನ್ನಾರ ನಡೆಯುತ್ತಿದೆ ಎಂದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ