ಧಾರವಾಡ : ಎದುರಿಗೆ ಬರುತ್ತಿದ್ದ ಕಾರಿನ ಅಪಘಾತ ತಪ್ಪಿಸಲು ಹೋಗಿ ಸಾರಿಗೆ ಬಸ್ ಧಾರವಾಡ ಕೃಷಿ ವಿಶ್ವವಿದ್ಯಾಲಯ ಮುಖ್ಯದ್ವಾರದ ಬಳಿಯಿರುವ ಡಿವೈಡರ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಬೈಲಹೊಂಗಲದಿಂದ ಧಾರವಾಡಕ್ಕೆ ಬರುತ್ತಿದ್ದ ವಾಕರಸಾ ಸಂಸ್ಥೆ ಬಸ್ ಕಾರಿಉ ಮುಂಭಾಗಕ್ಕೆ ತಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದು, ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಉರುಳಿಬಿದ್ದಿದೆ.
ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತ ಗೊಂಡಿತು. ಸ್ಥಳಕ್ಕೆ ಧಾವಿಸಿದ ಧಾರವಾಡ ಸಂಚಾರ ಠಾಣೆ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.