ಹುಬ್ಬಳ್ಳಿ: ಧರ್ಮಸ್ಥಳ ದೇವಸ್ಥಾನ , ಪೂಜ್ಯ ವೀರೇಂದ್ರ ಹೆಗ್ಗಡೆ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ ಎಂದು ಜಿಲ್ಲಾ ಜನಜಾಗೃತಿ ವೇದಿಕೆಯ ರಾಜ್ಯಧ್ಯಕ್ಷ ರಾಜಣ್ಣ ಕೊರವಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಕಿ ಮಾತನಾಡಿದ ಅವರು, 2011ರಲ್ಲಿ ಸೌಜನ್ಯ ಕೊಲೆ ನಡೆದಿದೆ. ಆ ವಿಚಾರಕ್ಕೆ ಸಂಬಂಧಿಸಿ ಧರ್ಮಸ್ಥಳ ಕ್ಷೇತ್ರ, ಪೂಜ್ಯರನ್ನು ಜೋಡಿಸುವುದು ಯಾವ ನ್ಯಾಯ. ವೀರೇಂದ್ರ ಹೆಗ್ಗೆಡೆ ಅವರು ಸ್ವತಃ ಸಿಐಡಿ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ನಮ್ಮ ರಾಜ್ಯ, ಕೇಂದ್ರ ಸರ್ಕಾರದ ಗೃಹ ಸಚಿವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ ಎಂದು ಹೇಳಿದರು.