ಹುಬ್ಬಳ್ಳಿ: ನನ್ನ ಸೋಲಿಗೆ ಕಾರಣವಾದ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ. ಆದಷ್ಟು ಬೇಗ ಪ್ರಮುಖ ಕಾರ್ಯಕರ್ತರು, ಕಾಂಗ್ರೆಸ್ ನಾಯಕರನ್ನು ಸಭೆ ಕರೆದು ಚರ್ಚೆ ಮಾಡುತ್ತೇನೆ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಸಿಕ್ಕಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನ್ನನು ಆಯ್ಕೆ ಮಾಡುವುದಕ್ಕೆ ನಾಯಕರೇ ಸಿಗದ ಪರಿಸ್ಥಿತಿ ಆ ಪಕ್ಷದಲ್ಲಿದೆ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದರು.