ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ.
ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ.
ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದ ಪರಿಣಾಮ ರಸ್ತೆ ತುಂಬ ವಿದ್ಯುತ್ ತಂತಿಗಳು ಹರಿದು ಬಿದ್ದಿವೆ. ಮರ ಬಿದ್ದ ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು, ಹೆಸ್ಕಾಂನವರು ಹಾಗೂ ಪಾಲಿಕೆಯವರು ಭೇಟಿ ನೀಡಿ ಮರ ತೆರವುಗೊಳಿಸುವ ಕೆಲಸ ಮಾಡಿದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…
ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…