News Karnataka Kannada
Sunday, May 05 2024
ಹುಬ್ಬಳ್ಳಿ-ಧಾರವಾಡ

ದೆಹಲಿಯತ್ತ ಪ್ರಯಾಣ ಬೆಳೆಸಿದ ಇಬ್ಬರು ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು

Two Hindu firebrand leaders travel to Delhi
Photo Credit : News Kannada

ಹುಬ್ಬಳ್ಳಿ: ಇಬ್ಬರು ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ.

ಭಾನುವಾರ ರಾತ್ರಿ 8.30ರ ವಿಮಾನದಲ್ಲಿ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್‍ಗಳು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ. ಈ ಇಬ್ಬರು ನಾಯಕರ ಜೊತೆಗೆ ಸಂಸದ ಸಂಗಣ್ಣ ಕರಡಿ ಕೂಡ ಅದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಸದ್ಯ ಯತ್ನಾಳ್ ಹಾಗೂ ಅನಂತ್ ಕುಮಾರ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಿ.ಎಸ್ ಯಡಿಯೂರಪ್ಪ ಅವರ ಮಗ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಯತ್ನಾಳ್‍ಗೆ ಸ್ವಪಕ್ಷ ವಿರುದ್ಧ ಇದ್ದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ. ಮಂಗಳವಾರ ಕೇಂದ್ರ ಕಚೇರಿಯಿಂದ ಸೂಚನೆ ಕೊಟ್ಟಿದ್ದಾರೆ. ಹೈಕಮಾಂಡ್ ಕರೆ ಬಂದ ಕೂಡಲೇ ದೆಹಲಿಗೆ ಹೋಗ್ತೀನಿ. ಅಲ್ಲಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು