News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ ಮುಂದೂಡುವ ದುರುದ್ದೇಶ: ಎಚ್ ಕೆ ಪಾಟೀಲ್

Ulterior ulterior delay Lok Sabha elections: H K Patil
Photo Credit : News Kannada

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇದರಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದು, ಅವರಿಗೆ ರಾಜಕೀಯ ವಾಸನೆ ಇದ್ದವರಾಗಿದ್ದಾರೆ. ಕೇಂದ್ರ ಸರ್ಕಾರದ ಲೋಕಸಭಾ ಅವಧಿ ವಿಸ್ತಾರ ಮಾಡಿ ಚುನಾವಣೆ ಮುಂದೂಡುವ ದುರುದ್ದೇಶವಿದೆ ಎಂದರು.

ಮೋದಿ ಅವರು ಚುನಾವಣೆ ಮುಂದುಡುವುದು, ಸಂವಿಧಾನ ಬದಲಿಸಿ ಲೋಕಸಭಾ ಚುನಾವಣೆ ಮುಂದುಡಿದರೆ ಜನರು ಸುಮ್ಮನ್ನಿರಲ್ಲ. ಸಮಿತಿಯಲ್ಲಿ ಸುಪ್ರೀಂ ಕೋಟ್೯ ನ್ಯಾಯಾಧೀಶರು ನೇಮಕ ಮಾಡಬೇಕಿತ್ತು. ಪಕ್ಷಾತೀತ ವಿದ್ದ ಎಷ್ಟೊಂದು ಜನರಿದ್ದಾರೆ ಅಂತವರ ನೇಮಕ ಮಾಡಿಕೊಳ್ಳಬೇಕಿತ್ತು. ಕೇಂದ್ರ ಸರ್ಕಾರ ಹೆಜ್ಜೆಯಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಹೇಳಿದರು.

ಕರ್ನಾಟಕ ಚುನಾವಣೆ ಬಳಿಕ ಬಿಜೆಪಿ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದಲ್ಲಿ ಅವರ ಪರಿಸ್ಥಿತಿ ಹದಗೆಡುತ್ತಿದೆ. ಐದು ಗ್ಯಾರಂಟಿ ಯಶಸ್ಸು ನೋಡಿ ಕೇಂದ್ರ ಸರ್ಕಾರ ಭಯದಿಂದ ಬೆಲೆ ಇಳಿಕೆ ಮಾಡುತ್ತಿದೆ ಎಂದರು. ಅನುಮತಿ ಕೊಡಿಸಬೇಕು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು