ಹುಬ್ಬಳ್ಳಿ: ಕೆ. ಎಸ್ ಈಶ್ವರಪ್ಪ ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಲೋಕಸಭೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು. ಈಶ್ವರಪ್ಪ ಅವರ ಜೊತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ಹೇಳಿದರು.
ಈಶ್ವರಪ್ಪ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.