ಧಾರವಾಡ: ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ವೀರ ರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆಯ ಕುರಿತು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರತಿ ವರ್ಷದಂತೆ ವೀರ ರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ಆಚರಿಸಲು ಜಿಲ್ಲಾಡಳಿತ ಕಾರ್ಯಕ್ರಮ ರೂಪಿಸಿದೆ. ಕಾರ್ಯಕ್ರಮದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ವೀರ ರಾಣಿ ಕಿತ್ತೂರು ಚನ್ನಮ್ಮ ಜಯಂತಿಯನ್ನು ನಗರದ ಕರ್ನಾಟಕ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಅ.23 ರಂದು ಮಧ್ಯಾಹ್ನ 3 ಗಂಟೆಗೆ ಆಚರಿಸಲಾಗುವುದು. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ರೂಪುರೇμÉಗಳನ್ನು ಅಧಿಕಾರಿಗಳು ಸಿದ್ಧಪಡಿಸಲಿದ್ದು, ಸಮುದಾಯದ ಮುಂಖಡರು ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಜಯಂತಿ ಕಾರ್ಯಕ್ರಮದ ಕುರಿತು ಮಾತನಾಡಿದರು.
ಸಭೆಯಲ್ಲಿ ಪಾಲಿಕೆಯ ಸದಸ್ಯ ಶಂಭುಗೌಡ ಸಾಲಮನಿ, ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ್, ಮುಖಂಡರಾದ ನಿಂಗಣ್ಣ ಕರಿಕಟ್ಟಿ, ಬಸವಂತ ತೋಟದ, ಮಡಿವಾಳಪ್ಪ ಶಿರಿಯಣ್ಣವರ, ಗೌರಮ್ಮ ಬಲೂಗಿ ಸೇರಿದಂತೆ ಪಂಚಮಸಾಲಿ ಹಾಗೂ ಇತರ ಸಮುದಾಯಗಳ ಜನರು ಉಪಸ್ಥಿತರಿದ್ದರು.