News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ವಿನಯ ಕುಲಕರ್ಣಿಗೆ ಗೆಲುವು: ಪತ್ನಿ ಶಿವಲೀಲಾ ಕುಲಕರ್ಣಿ ಹರ್ಷ

Vinay Kulkarni's wife Shivleela Kulkarni expresses happiness over victory
Photo Credit : News Kannada

ಧಾರವಾಡ : ಧಾರವಾಡ ಜಿಲ್ಲೆಯ ಗಡಿ ಭಾಗದಲ್ಲೇ ನಿಂತು ಚುನಾವಣೆ ಮಾಡಿದ ವಿನಯ್ ಕುಲಕರ್ಣಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿಯವರ ವಿರುದ್ಧ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಅವರು ಸತತ ಎರಡನೇ ಬಾರಿಯೂ ಗೆಲುವಿನ ಲೆಕ್ಕಾಚಾರದಲ್ಲಿದ್ದರು. ಆದರೆ, ಮತದಾರನ ಅಂತಿಮ ನಿರ್ಣಯವೇ ಬೇರೆಯಾಗಿತ್ತು.

ಅಂಚೆ ಮತ ಎಣಿಕೆಯಿಂದಲೇ ಮುನ್ನಡೆ ಕಾಯ್ದುಕೊಂಡು ಬಂದ ವಿನಯ್ ಕುಲಕರ್ಣಿ ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡೇ ಬಂದು ಗೆಲುವು ಸಾಧಿಸಿದರು. ಧಾರವಾಡ ಗ್ರಾಮೀಣ ಕ್ಷೇತ್ರದ ಈ ಚುನಾವಣೆ ಇಡೀ ರಾಜ್ಯದ ಗಮನಸೆಳೆದಿತ್ತು. ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ಹಾಗೂ ಅವರ ಮಕ್ಕಳು ಅಬ್ಬರದ ಪ್ರಚಾರ ನಡೆಸಿದ್ದರು. ಕೊನೆಗೂ ಶಿವಲೀಲಾ ಕುಲಕರ್ಣಿ ಅವರ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಾನೇ ವಿನಯ್ ಕುಲಕರ್ಣಿ ಎಂದು ಅಭಿಯಾನ ಕೂಡ ಆರಂಭಿಸಿದ್ದರು. ತಳಮಟ್ಟದಿಂದ ಕಾಂಗ್ರೆಸ್ ಕಾರ್ಯಕರ್ತರು ದೊಡ್ಡಮಟ್ಟದಲ್ಲಿ ಕಸರತ್ತು ನಡೆಸಿದ್ದರಿಂದ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ ಕಾಲಿಡದಿದ್ದರೂ ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯವರು ಕೂಡ ಅಬ್ಬರದ ಪ್ರಚಾರವನ್ನೇ ನಡೆಸಿದ್ದರು. ನಿರೀಕ್ಷೆಗೂ ಮೀರಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು