News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧ: ಪ್ರಹ್ಲಾದ್ ಜೋಶಿ

We are committed to implementing Mahadayi project: Prahlad Joshi
Photo Credit : News Kannada

ಹುಬ್ಬಳ್ಳಿ: ಮೋದಿ ಸರ್ಕಾರ ಡಿಪಿಎಆರ್‌ ಗೆ ಅನುಮತಿ ನೀಡಿದರು. ಮಹದಾಯಿ ನೋಟಿಫಿಕೇಶನ್ ನಾವೇ ಮಾಡಿಸಿದೆವು. ಪರಿಸರ ವಿನಾಯಿತಿಯನ್ನು ಕೊಡಿಸಿದೆವು. ಗೆಜೆಟ್ ನೋಟಿಫಿಕೇಶನ್ ಜೊತೆ ಡಿಪಿಎಆರ್ ಅಪ್ರುವಲ್ ಮಾಡಿದ್ದೇವೆ. ಟೈಗರ್ ಕಾರಿಡಾರ್ ಮತ್ತು ಇಕೋ ಸೆನ್ಸಿಟಿವ್ ಝೋನ್ ಕಾರಣಕ್ಕೆ  ಯೋಜನೆ ಜಾರಿ ವಿಳಂಬವಾಗಿದೆ. ಹಸಿರು ನ್ಯಾಯಾಧಿಕರಣದ ಅನುಮತಿ ಸಿಗಬೇಕಿದೆ ಎಂದು ಮಹದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕಿದ  ಪ್ರತಿಭಟನಾಕಾರರಿಗೆ  ಕೇಂದ್ರ ಸಚಿವ  ಪ್ರಹ್ಲಾದ್ ಜೋಶಿ ಸಮಸ್ಯೆ ವಿವರಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆ ಕೆಲ ಸ್ಪಷ್ಟೀಕರಣ ಕೇಳಿದೆ. ರಾಜ್ಯಮಟ್ಟದಲ್ಲಿ ವೈಲ್ಡ್ ಲೈಫ್ ಗೆ ಅನುಮತಿ ಕೊಟ್ಟು ಕೇಂದ್ರಕ್ಕೆ ಕಳಿಸಬೇಕಿದೆ. ರಾಜ್ಯ ಸರ್ಕಾರ ಅನುಮತಿ ಕೊಡುವುದು ಬಾಕಿ ಇದೆ. ಕಳಸ ಬಂಡೂರಿ ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಯೋಜನೆ ಜಾರಿಗೆ ನಾವು ಎಲ್ಲ ರೀತಿಯ ತಯಾರಿಯಲ್ಲಿದ್ದೇವೆ. ಟ್ರಿಬ್ಯುನಲ್ ಆದೇಶದ ವಿರುದ್ಧ ಕರ್ನಾಟಕ ಸರ್ಕಾರದ ಜೊತೆ ಗೋವಾ ಸರ್ಕಾರವು ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ನಾವು ಡಿಪಿಎಆರ್ ಅನುಮತಿ ನೀಡಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿದೆ ಇದರಲ್ಲಿ ರಾಜಕೀಯದ ಪ್ರಶ್ನೆಯೇ ಇಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೂ ವಿನಂತಿಸಿದ್ದೇನೆ. ಕರ್ನಾಟಕ ವೈಲ್ಡ್ ಲೈಫ್ ಬೋರ್ಡ್ ನಲ್ಲಿ ಶಿಫಾರಸು ಮಾಡಬೇಕು. ಇದನ್ನು ಕೇಂದ್ರಕ್ಕೆ ಕಳಿಸಿದರೆ ನಾವು ಖಂಡಿತ ಅನುಮತಿ ನೀಡುತ್ತೇವೆ. ಕೇಂದ್ರದಿಂದ ಯಾವುದೇ ಮೀನಾ ಮೇಷ ನಡೆಯುತ್ತಿಲ್ಲ. ಗ್ರೀನ್ ಟ್ರಿಬ್ಯುನಲ್ ಅಸ್ತಿತ್ವಕ್ಕೆ ಬಂದ ನಂತರ ಇದಕ್ಕೆ ನಿಬಂಧನೆಗಳು ಹೆಚ್ಚಾಗಿವೆ. ಯೋಜನೆ ಅನುಷ್ಠಾನಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡ್ತೇವೆ . ಮಹದಾಯಿ ಯೋಜನೆ ಜಾರಿಗೆ ನಾವು ಬದ್ಧರಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು