ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಟಾರ್ಜ್ ಮಾಡಿಸಿಕೊಂಡು ಬಾಲಕರ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಥಾನಿ ಸ್ಪಷ್ಟಪಡಿಸಿದ್ದಾರೆ.
ಬಾಲಕ ಮೃತಪಟ್ಟಿದ್ದಾನೆ ಎಂದು ಅಂತ್ಯಸಂಸ್ಕಾರ ಮಾಡಲು ಹೋದ ಸಂದರ್ಭದಲ್ಲಿ ಜೀವಂತವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ ಅವರು, ಕಳೆದ ಎಂಟತ್ತು ದಿನದ ಹಿಂದೆ ಬಾಲಕ ಮೆದುಳು ಜ್ವರದಿಂದ ಬಳಲುತಿದ್ದು, ಮೆದುಳಿನಲ್ಲಿ ನೀರು ತುಂಬಿಕೊಂಡ ಹಿನ್ನಲೆ ಗದಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೇ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ಬಂದಿದ್ದರು. ನಮ್ಮ ವೈದ್ಯರು ಮೆದಳು ಜ್ವರದ ಕಾರಣದಿಂದ ಚಿಕಿತ್ಸೆ ನೀಡಿದ್ದಾರೆಂದರು.
ಆದರೇ ಬಾಲಕನ ಸಂಬಂಧಿಗಳು ಏಕಾಏಕಿಯಾಗಿ ಮಗು ಜೀವಂತ ಇರುವಾಗಲೇ ಡಿಸ್ಟಾರ್ಜ್ ಮಾಡಿಕೊಂಡು ತಮ್ಮ ಸ್ವ ಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ ಗ್ರಾಮಸ್ಥರು ಮಗು ಬದುಕಿದೆ. ಯಾಕೆ ಕರೆದುಕೊಂಡು ಬಂದಿದ್ದೀರಿ ಎಂದಾಗ ನವಲಗುಂದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮತ್ತೆ ತಡರಾತ್ರಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗುವಿನ ಸ್ಥಿತಿಯ ಬಗ್ಗೆ ಏನು ಹೇಳಲು ಆಗುವುದಿಲ್ಲ ಎಂದು ಡಾ. ರಾಮಲಿಂಗಪ್ಪ ಅಂಟರಥಾನಿ ಮಾಹಿತಿ ನೀಡಿದ್ದರು.