News Karnataka Kannada
Tuesday, May 07 2024
ಹುಬ್ಬಳ್ಳಿ-ಧಾರವಾಡ

ಭಾರತವನ್ನು ಹಿಂದೂ ರಾಷ್ಟ್ರ ಮಾಡೇ ಮಾಡ್ತೀವಿ: ಮುತಾಲಿಕ್

We will make India a Hindu rashtra: Muthalik
Photo Credit : News Kannada

ಹುಬ್ಬಳ್ಳಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನದ ರೀತಿ ಆಗುತ್ತದೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಧರ್ಮದ ಹೆಸರಲ್ಲಿ ಸರ್ವಾಧಿಕಾರ ಮಾಡಿ ದಿವಾಳಿಯಾಗಿವೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ 2024ರ ಚುನಾವಣೆ ಬಳಿಕ ಪ್ರಧಾನಿ ಮೋದಿ  ಗೆದ್ದ ನಂತರ ದೇಶ ಹಿಂದೂ ರಾಷ್ಟ್ರವಾಗುತ್ತೆ, ತಾಕತ್ತಿದ್ದರೆ ತಡೀರಿ ನೋಡೋಣ ಅಂತ  ಸವಾಲು ‌ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ  ನನಗೆ ಹಿಂದುತ್ವ ಆಗೋದಿಲ್ಲ ಅಂತ ಹೇಳ್ತಾರೆ. ಅಪ್ಪನ ಲುಂಗಿ ಹಿಡಿದುಕೊಂಡು ಬಂದವರು ಯತೀಂದ್ರ, ಅವರಿಗೆ ಹಿಂದೂ ಅಂದರೂ ಗೊತ್ತಿಲ್ಲ, ಹಿಂದುತ್ವವೂ ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ನೀಡಬೇಕು. ಏಕೆಂದರೆ, ಗೋದ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರು ಆಗಬಹುದು ಎಂಬ ಬಿ.ಕೆ.ಹರಿಪ್ರಸಾದ್‌ ಪ್ರಚೋದನಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿ.ಕೆ ಹರಿಪ್ರಸಾದ್‌ರನ್ನ ಈ ಕೂಡಲೇ ಬಂಧಿಸಬೇಕು. ಅವರನ್ನ ಬಂಧಿಸಿ ಗೋದ್ರಾ ಹತ್ಯಾಕಾಂಡ ಮರುಕಳಿಸುವ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು