ಐದು ಗ್ಯಾರಂಟಿ ಜಾರಿ ಆಗದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡುವೆ : ಕೋನರೆಡ್ಡಿ

ಹುಬ್ಬಳ್ಳಿ : ನನಗೂ ಸಹ ಮುಖ್ಯ ಮಂತ್ರಿ, ಉಪ ಮುಖ್ಯ ಮಂತ್ರಿ, ಮಂತ್ರಿ ಯಾಗಬೇಕು ಅನ್ನೋ ಆಸೆಯಿದೆ..ಅವಕಾಶ ಸಿಕ್ಕಾಗ ಆಗುತ್ತೇನೆ. ಎಲ್ಲರಿಗೂ ಆಸೆ ಇರುತ್ತೆ. ನನಗೂ ಕೃಷಿ ಸಚಿವನಾಗುವ ಆಸೆಯಿದೆ. ಯುವಕರಿಗೆ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಅಂದರೆ ನನ್ನನ್ನು ಸಹ ಪರಿಗಣಿಸಿ. ಐದು ಗ್ಯಾರಂಟಿ ಜಾರಿಗೆ ಮಾಡೇ ಮಾಡತ್ವಿ ಸ್ವಲ್ಪ ಕಾಲಾವಕಾಶ ಬೇಕು. ಐದು ಗ್ಯಾರಂಟಿ ಜಾರಿ ಆಗದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡುವೆ ಎಂದು ನವಲಗುಂದ ಶಾಸಕ ಕೋನರೆಡ್ಡಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ನನ್ನ ಬಳಿ ಹೊಸ ಡ್ರೆಸ್ ಯಾವಾಗಲೂ ಇರುತ್ತೆ. ನಾನು ರೈತ ಯಾವ ಡ್ರೆಸ್ ಆದ್ರೆನು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ ನೀಡಬೇಕು .ಸಚಿವ ಸ್ಥಾನ ಕೊಟ್ಟರೆ ಏನು ತಪ್ಪಿಲ್ಲ ಅವರು ಹಿರಿಯರು ಮತ್ತು ಮಾಜಿ ಸಿಎಂ ಇದ್ದಾರೆ. ಅವರಿಗೆ ಸರಿಸಮಾನವಾಗಿರುವ ಹುದ್ದೆ ನೀಡುವುದು ಸೂಕ್ತ. ಮಹದಾಯಿ ನೀರಿಗಾಗಿ ಬಿಜೆಪಿ ಹೇಳಿರುವ ಮಾಹಿತಿ ಪರಿಶೀಲನೆ ಮಾಡಲಾಗುತ್ತಿದೆ. ಬಿಜೆಪಿ ಎಷ್ಟು ಸುಳ್ಳು ಹೇಳಿದ್ದಾರೆ ಎಷ್ಟು ಸತ್ಯ ಹೇಳಿದ್ದಾರೆ ಅಂತ ಸಮಾಲೋಚನೆ ಮಾಡಲಾಗುತ್ತಿದೆ. ಮಹಾದಾಯಿ ವಿಚಾರವಾಗಿ ಬಿಜೆಪಿ ಯಾವುದೇ ಟೆಂಡರ್ ಕರೆದಿಲ್ಲ.ಕೇವಲ ನೋಟಿಸ್ ತೋರಿಸಲಾಗುತ್ತಿದೆ. ಅರಣ್ಯ ಇಲಾಖೆ ಯಾವುದೇ ಕ್ಲಿಯರೆನ್ಸ್ ನೀಡಿಲ್ಲ.

ಭಜರಂಗದಳ ಬ್ಯಾನ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ.ನಂದೆನಿದ್ದರು ರೈತರ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಚಿಂತನೆ.

ನನ್ನ ಕ್ಷೇತ್ರದ ಅನುದಾನ ಬಗ್ಗೆ, ರಸ್ತೆಗಳ ಸುಧಾರಣೆ ಬಗ್ಗೆ ಮಾತ್ರ ಆಲೋಚನೆ ಮಾಡುತ್ತಿರುವೆ.ಅದರ ಬಗ್ಗೆ ದೊಡ್ಡ ದೊಡ್ಡವರು ಏನು ಮಾತನಾಡಿದ್ದಾರೆ ಅವರನ್ನಾ ಕೇಳಿ. ನನಗೆ ಅದರ ಬಗ್ಗೆ ಏನು ಗೊತ್ತಿಲ್ಲ ಎಂದರು.

Sneha Gowda

Recent Posts

ಅಶ್ಲೀಲ ವಿಡಿಯೋ ವೈರಲ್ ಪ್ರಕರಣ; ಜೆಡಿಎಸ್‌ನಿಂದ ಪ್ರಜ್ವಲ್ ಉಚ್ಛಾಟನೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್‌ಗೆ ದೊಡ್ಡ ತಿರುವು ಸಿಕ್ಕಿದ್ದು, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ…

6 mins ago

ಇಪ್ಪತ್ತೆಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಯಡಿಯೂರಪ್ಪ

ಕರ್ನಾಟಕದಲ್ಲಿ ಚುನಾವಣೆ ವಾತಾವರಣ ಚೆನ್ನಾಗಿ ಇದೆ. ಈಗ ಚುನಾವಣೆ ನಡೆದಿರೋ 14 ಕ್ಷೇತ್ರಗಳಲ್ಲಿ ನಾವು 14 ಗೆಲ್ಲುತ್ತೇವೆ. ಮುಂದೆ ನಡೆಯುವ…

10 mins ago

ಲಾರಿಗೆ ಡಿಕ್ಕಿ ಹೊಡೆದ ಕಾರು : ಚಾಲಕ ಸ್ಥಳದಲ್ಲೇ ಸಾವು

ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ…

18 mins ago

ಮೋದಿ ಚುನಾವಣೆಯಲ್ಲಿ ಹತಾಶರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

ನರೇಂದ್ರ ಮೋದಿ ಈ ಚುನಾವಣೆಯಲ್ಲಿ ಹತಾಶರಾಗಿದ್ದಾರೆ. ಅವರಿಗೆ ಚುನಾವಣೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾರಿ-ವಿಜಯನಗರ ಲೋಕಸಭಾ…

20 mins ago

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14…

37 mins ago

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

1 hour ago