ಹುಬ್ಬಳ್ಳಿ : ನಗರದಲ್ಲಿ ಜೆಡಿಎಸ್ ಪಕ್ಷದ ಯುವಕರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೆ ವೇಳೆ ಶೆಟ್ಟರ್ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್ ಎಚ್ ಕೊನರಡ್ಡಿ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ ಕುಮಾರ ಪಾಟಿಲ, ಬಂಗಾರೇಶ್ ಹಿರೇಮಠ, ಶ್ರೀಮತಿ ಸುವರ್ಣ ಕಲ್ಲಕುಂಟ, ಮತ್ತು ಪಕ್ಷದ ಹಿರಿಯ ಮುಖಂಡರು ಪಾಲ್ಗೊಂಡಿದ್ದರು.