Categories: ಗದಗ

ಒಂದು ಸಾರಿ ಕಾಂಗ್ರೆಸ್ ಬಿಟ್ಟು ಬಂದ ಮೇಲೆ ಮತ್ತೆ ಮರಳಿ ಹೋಗುವ ಮಾತೆ ಇಲ್ಲ: ಸಚಿವ ಬಿ.ಸಿ.ಪಾಟೀಲ್

ಗದಗ: ಸೊಸೆಯಾಗಿ ಬಂದು ಮೊಳೆ ಹೊಡೆದು ಮನೆ ಮಗಳಾಗಿದ್ದೇವೆ. ನಾವು ಏಕೆ ಪಕ್ಷಬಿಟ್ಟು ಹೋಗೋಣ ಒಂದು ಸಾರಿ ಕಾಂಗ್ರೆಸ್ ಬಿಟ್ಟು ಬಂದ ಮೇಲೆ ಮತ್ತೆ ಮರಳಿ ಪಕ್ಷಕ್ಕೆ ಹೋಗುವ ಮಾತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯ ೧೭ ಶಾಸಕರು ಮರಳಿ ಕಾಂಗ್ರೆಸ್‌ಗೆ ಹೋಗುವ ಆರೋಪಕ್ಕೆ ಉತ್ತರಿಸಿದ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನವರೇ ಬಹಳ ಜನ ಬಿಜೆಪಿಗೆ ಬರಲಿದ್ದಾರೆ. ಕಾಂಗ್ರೆಸ್‌ನವರಿಗೆ ಯಾಕೆ ಬಿಜೆಪಿಯವರ ಮೇಲೆ ಅಷ್ಟೊಂದು ಮಮಕಾರ ಗೊತ್ತಿಲ್ಲ, ಬಾರಿ ಸ್ಟ್ರಾಂಗ್ ಇದ್ದೇವೆ ನಾವೇ ಅಧಿಕಾರಕ್ಕೆ ಬರುತ್ತವೆ ಎಂದು ಹೇಳುವ ಕಾಂಗ್ರೆಸ್ ನಾಯಕರು ಅಲ್ಲಿದ್ದವರಿಗೆ ಟಿಕೇಟ್ ಕೊಡಬಹುದಿತ್ತಲ್ವಾ ಇನ್ನೊಂದು ಪಕ್ಷದಿಂದ ಬರುತ್ತಾರೆ ಎಂದು ನಿರೀಕ್ಷೆಯಲ್ಲಿದ್ದಾರೆ ಎಂದರೆ ಕಾಂಗ್ರೆಸ್ ಪಕ್ಷ ಸಂಪೂರ್ಣ ನಶಿಸಿ ಹೋಗಿದೆ. ಅವರ ತಳಪಾಯ ಕುಸಿದು ಹೋಗಿದೆ
ಹೀಗಾಗಿ ಬೇರೆ ಯಾರಾದರೂ ಬರುತ್ತಾರೆ ಎಂದು ದಾರಿ ಕಾಯುತ್ತಿದ್ದಾರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು ಐದು ಬೆರಳುಗಳೂ ಸಮ ಇರಲ್ಲ, ನಾಲ್ಕು ಸ್ಥಾನಗಳು ಖಾಲಿ ಇವೆ. ಅಧಿಕಾರ ಪಡೆಯಬೇಕೆಂದು ಎಲ್ಲರಿಗೂ ಆಸೆ ಇರುತ್ತದೆ. ಪುನರ್‌ರಚನೆ ಅಥವಾ ವಿಸ್ತರಣೆ ಮಾಡುವುದು ಮುಖ್ಯಮಂತ್ರಿ ಅವರ ಕೈಯಲ್ಲಿದೆ ಎಂದು ಹೇಳಿದ ಅವರು ಸಿಎಂ ಬದಲಾವಣೆ ಸಾಧ್ಯವೇ ಇಲ್ಲ ಸತ್ಯಕ್ಕೆ ದೂರವಾದ ಮಾತು ಅಮಿತ್ ಶಾ, ನಡ್ಡಾ, ಅರುಣ್ ಸಿಂಗ್ ಹಾಗೂ ಪ್ರಲ್ಹಾದ್ ಜೋಷಿಯವರೇ ಈ ಬಗ್ಗೆ ಹೇಳಿದ್ದು, ೨೦೨೩ ರವರೆಗೂ ಬಸವರಾಜ ಬೊಮ್ಮಾಯಿವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.

ಆರು ತಿಂಗಳ ಅವಧಿ ಮುಗಿದ ಮೇಲೆ ಸಿಎಂ ಬದಲಾವಣೆ ಆಗುತ್ತಾರೆ ಎನ್ನುವ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಸಿದ ಸಚಿವರು ಆರು ತಿಂಗಳವರೆಗೆ ಮಾತ್ರ ಮುಖ್ಯಮಂತ್ರಿ ಎಂದು ಅವರಿಗೆ ಯಾರಾದರೂ ಬರೆದುಕೊಟ್ಟಿದ್ದಾರೆಯೇ ಕಾಂಗ್ರೆಸ್‌ನವರಲ್ಲಿಯೇ ಅನುಮಾನವಿದೆ ಅವರ ಕಾಲ ಕೆಳಗೆ ಹಳ್ಳ, ಹೊಳೆಗಳು ಹರಿಯುತ್ತಿವೆ. ಅವರೇ ಎಲ್ಲಿಲ್ಲಿ ಜಾರಿಕೊಂಡು ಯಾವಾಗ ಬೀಳುತ್ತಾರೆ ಎಂದು ಗೊತ್ತಿಲ್ಲ ಡಿಕೆಶಿ ಹಾಗೂ ಸಿದ್ಧರಾಮಯ್ಯ ಕಚ್ಚಾಟದಲ್ಲಿ ದೇಶದಲ್ಲೇ ಕಾಂಗ್ರೆಸ್ ಪಕ್ಷ ಮುಗಿದುಹೋಗಿದೆ, ಆದಷ್ಟು ಬೇಗ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.

ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎರಡು ದಿನಗಳ ಜನತಾ ದರ್ಶನ ಹಮ್ಮಿಕೊಳ್ಳಲಾಗುವುದು. ಕೃಷಿ ಇಲಾಖೆಯಲ್ಲಿ ಶೇ. ೫೬ ರಷ್ಟು ವಿವಿದ ಹಂತದ ಹುದ್ದೆಗಳು ಖಾಲಿಯಿದ್ದು, ಅವುಗಳ ಭರ್ತಿಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಸಚಿವರು ಬೆಳೆ ವಿಮಾ ಯೋಜನೆ ದುರ್ಬಳಕೆಯಾಗುತ್ತಿರುವ ಬಗ್ಗೆ ರಾಜ್ಯದಲ್ಲೇ ಮೊದಲ ಪ್ರಕರಣ ಗದಗಿನಲ್ಲಿ ಬೆಳಕಿಗೆ ಬಂದಿದೆ. ಸಂಬಂಧಿಸಿದವರ ವಿರುದ್ಧ ಈಗಾಗಲೇ ಇಲಾಖೆಯಿಂದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಜೊತೆಗೆ ಈ ರೀತಿಯ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ಎಲ್ಲ ವಿಮಾ ಕಂಪನಿಗಳ ಅಧಿಕಾರಿಗಳ ಸಭೆ ನಡೆಸಿ, ಚರ್ಚೆ ನಡೆಸಲಾಗುವುದು. ಮಹಿಕೋ ಬಿಟಿ ಹತ್ತಿ ಕಳಪೆ ಬಿತ್ತನೆ ಬೀಜ ವಿತರಣೆ ಬಗ್ಗೆಯೂ ದೂರುಗಳು ಬಂದಿದ್ದರಿಂದ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

Sneha Gowda

Recent Posts

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

15 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

33 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

55 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

1 hour ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

1 hour ago