ಗದಗ : ರಾಜ್ಯದಲ್ಲಿ ಕೊರೊನಾ ಸೋಂಕಿನ ಬೆನ್ನಲ್ಲೇ ಡೆಂಗ್ಯೂ ಆತಂಕ ಎದುರಾಗಿದ್ದು, ಶಂಕಿತ ಡೆಂಗ್ಯೂಗೆ 10ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದಿದೆ.
ಹರದಗಟ್ಟಿ ಗ್ರಾಮದ ಶಿವಪ್ಪ ಮತ್ತು ತುಳಚಾಬಾಯಿ ದಂಪತಿಯ ಮಗಳು ವೈಶಾಲಿ ಶಿವಪ್ಪ ಸಾವನ್ನಪ್ಪಿದ ವಿದ್ಯಾರ್ಥಿನಿ. ದಸರಾ ರಜೆಗೆ ಊರಿಗೆ ಬಂದಿದ್ದ ವೈಶಾಲಿ, ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.