News Karnataka Kannada
Saturday, April 27 2024
ಗದಗ

ಗದಗ ಪೊಲೀಸ್​​ ಕಾನ್ಸ್​ಟೇಬಲ್​ ಆತ್ಮಹತ್ಯೆ ಪ್ರಕರಣ: 9 ಮಂದಿ ಮೇಲೆ ಎಫ್​ಐಆರ್

Fir
Photo Credit :

ಗದಗ : ಕಿರುಕುಳಕ್ಕೆ ಬೇಸತ್ತು ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.

ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, ಮಾನಸಿಕ ಹಿಂಸೆ ತಾಳದೇ ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಎಂದಿನಂತೆ ಡ್ಯೂಟಿಗೆ ಹೋಗಬೇಕು ಎಂದು ಊಟದ ಬಾಕ್ಸ್​ ಕಟ್ಟಿಕೊಂಡಿದ್ದ. ಪತ್ನಿ ಹಾಗೂ ತಂದೆ ತಾಯಿ ಸೇರಿದಂತೆ ಕುಟುಂಬಸ್ಥರು ಧಾರವಾಡಕ್ಕೆ ಹೋಗಿದ್ದರು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಅರ್ಜುನ್ ಪಾಟೀಲ್​ಗೆ ಯಾವುದೋ ಸಂದೇಶ ಬಂದಿದ್ದು, ಬಳಿಕ ಮನೆಯಲ್ಲೇ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಅರ್ಜುನ್ ಪಾಟೀಲ್​ಗೆ ಪತ್ನಿ, ಇಬ್ಬರು ಮಕ್ಕಳು, ತಂದೆ-ತಾಯಿ‌ ಇದ್ದರು. ಲಕ್ಕುಂಡಿ ಗ್ರಾಮದಲ್ಲಿ ಪಾರ್ಥಿವ ಶರೀರಕ್ಕೆ ಪೊಲೀಸ್​​ ಇಲಾಖೆಯಿಂದ ಗೌರವ ಸಲ್ಲಿಸಲಾಯಿತು. ಡಿವೈಎಸ್​​ಪಿ ಶಿವಾನಂದ, ಸಿಪಿಐ ಸೇರಿದಂತೆ ಹಲವರು ಈ ವೇಳೆ ಭಾಗಿಯಾಗಿದ್ದರು. ಮಗನ ಕಳೆದುಕೊಂಡ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಸಂಬಂಧ ಗದಗ ಗ್ರಾಮೀಣ ಠಾಣೆಯಲ್ಲಿ ಕಿರುಕುಳ ನೀಡಿದ್ದ ಆರೋಪದ ಮೇಲೆ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿ 9 ಜನರ ಮೇಲೆ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು