ಗದಗ : ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಗದುಗಿನ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಶ್ರೀ ಜಗದ್ಗುರು ಡಾ.ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮಿಗಳ ಐಕ್ಯ ಮಂಟಪವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಲಿಂಗೈಕ್ಯ ಡಾ. ತೋಂಟದ ಸಿದ್ದಲಿಂಗ ಶ್ರೀಗಳ ಜನ್ಮ ದಿನವಾದ ಫೆ. 21 ನ್ನು `ಭಾವೈಕ್ಯ ದಿನ’ವನ್ನಾಗಿ ಆಚರಿಸಲಾಗುವುದು.
ಈ ಕುರಿತು ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಡಾ.ತೋಂಟದ ಸಿದ್ದಲಿಂಗ ಶ್ರೀಗಳುಉ ಕಟ್ಟಡಗಳನ್ನು ಕಟ್ಟಲಿಲ್ಲ.ಜನರ ಮನಸುಗಳನ್ನು ಕಟ್ಟಿ ಬೆಳೆಸಿದ್ದಾರೆ. ಶ್ರೀಗಳು ಕನ್ನಡ ಭಾಷೆಗೆ ಧಕ್ಕೆ ಉಂಟಾದಾಗಲೆಲ್ಲ ಧ್ವನಿ ಎತ್ತುತ್ತಿದ್ದರು ಎಂದು ಹೇಳಿದರು.