News Karnataka Kannada
Sunday, May 05 2024
ಗದಗ

ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್: ಶ್ರೀರಾಮುಲು

Sri Ramulu
Photo Credit :

ಗದಗ: ಇಡಿ ಕರ್ನಾಟಕದ ಜನತೆ ಮೆಚ್ಚುವಂತಹ ಆಡಳಿತವನ್ನು ನಾವು ನೀಡುತ್ತಿದ್ದು, ದೇವರ ಆಶಿರ್ವಾದದಿಂದ ೨೦೨೩ ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ನಗರದ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಿಂದ ಅಡಮಾನವಿಟ್ಟ ಪಡೆದ ಹಣದಿಂದ ನೌಕರರ ಭವಿಷ್ಯನಿಧಿಗೆ ನೀಡಲಾಗಿದೆ. ಒಮದೂವರೆ ತಿಂಗಳ ನೌಕರರ ವೇತನ ಬಾಕಿ ಇದ್ದು ವಾರದೊಳಗೆ ಈ ಸಮಸ್ಯೆಯನ್ನು ಬಗೆಹರಿಸಿ ಪ್ರತಿ ತಿಂಗಳು ವೇತನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ, ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ವಿಜಯದ ನಾಗಾಲೋಟ ಮುಂದುವರೆಸಿದ್ದು, ದೇಶಾದ್ಶಂತ ಜನರು ಬಿಜೆಪಿ ಪರವಾಗಿ ಇದ್ದಾರೆ ಎಂದು ಮತ್ತೊಮ್ಮೆ ಸಾಬೀತಾಗಿದೆ.

ಇಡೀ ದೇಶದಲ್ಲಿ ಕಾಂಗ್ರೇಸ್ ಧೂಳಿಪಟ ಆಗುತ್ತಿದೆ, ಮುಂಬರುವ ದಿನಗಳಲ್ಲಿ ರಾಹುಲ್ ಗಾಂಧಿ, ಪಾರ್ಟ್ ಟೈಮ್ ನಾಯಕರಾಗಿ ಉಳಿಯಲಿದ್ದಾರೆ. ಇಡೀ ದೇಶದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೇಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು