News Karnataka Kannada
Monday, April 29 2024
ಗದಗ

2023ರ ಚುನಾವಣೆಯು ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತದೆ: ಸಚಿವ ಬಿ.ಶ್ರೀರಾಮುಲು

Sri Ramulu
Photo Credit :

ಗದಗ: ನಾಯಕತ್ವದ ಬದಲಾವಣೆಯ ಯಾವುದೇ ಪ್ರಸ್ತಾಪ ಪಕ್ಷದ ಎದುರು ಇಲ್ಲ 2023ರ ಚುನಾವಣೆಯು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದರು. ಸಂಪುಟ್ ವಿಸ್ತರಣೆ ಕುರು ಮಾತನಾಡಿದ ಅವರು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಹಾಗೂ ಹೈಕಮಾಂಡ್ ಚರ್ಚಿಸಿ ನಿರ್ಧಾರ ತೆಗೆದುಕೊಳ್ತಾರೆ.

ಯಾರಿಗೆ ಯಾವ ಸ್ಥಾನ ಎಂಬುದು ಪಕ್ಷದ ಹಿರಿಯರು, ಹೈಕಮಾಂಡ್ ನಿರ್ಧಾರ ಅಂತಿಮವಾಗಿದೆ. ಅಲ್ಲದೆ, ಡಿಸಿಎಂ ಆಯ್ಕೆ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಅಧಿಕಾರ ಬೇಡ ಅಂತಲ್ಲ, ಆಸೆ ಎಂಬುದು ಎಲ್ಲರಿಗೂ ಇರುತ್ತೆ ಆದರೆ, ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೆವೆ ಎಂದು ಪರೋಕ್ಷವಾಗಿ ಡಿಸಿಎಂ ಹುದ್ದೆಗೆ ಬಿ.ಶ್ರೀರಾಮುಲು ಅವರು ಆಸೆ ವ್ಯಕ್ತಪಡಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಯಕ್ತಿಕ ಹೇಳಿಕೆಗೆ ಪ್ರತಿಕ್ರಿಯೆ ನೀಡುವದಿಲ್ಲ ಬೊಮ್ಮಾಯಿಯವರು ಎಲ್ಲ ಜಾತಿ ಧರ್ಮದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ವಿಶಾಲ ಹೃದಯದವರು ಎಂದರು.

ಹಿರಿಯ ನಾಯಕ ಸಂತೋಷ್‌ಜೀ ಹೇಳಿರುವ ವಿಚಾರ ಸರಿಯಾಗಿದೆ. ಹೊಸಬರಿಗೆ ಅವಕಾಶ ನೀಡುವದರಿಂದ ಜಿಡ್ಡುಗಟ್ಟಿದ ವ್ಯವಸ್ಥೆ ಬದಲಾಗಲಿದೆ. ರಾಜಕಾರಣ ನಿಂತ ನೀರಲ್ಲ, ಹರಿಯುವ ನೀರು. ರಾಜಕೀಯವಾಗಿ ನಿಶಕ್ತರಾದವರು ತೊಲಗಬೇಕು ಹೊಸಬರು ಬರಬೇಕು ಎಂದು ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ಪಿಎಸ್‌ಐ ನೇಮಕಾತಿಯಲ್ಲಿ ಭಷ್ಟಾಚಾರ ನಡೆದಿದೆ ಎಂದು ಕಂಡು ಹಿಡಿದಿದ್ದು ನಾವೇ, ನಮ್ಮ ಸರ್ಕಾರವೇ ತನಿಖೆಗೆ ಆದೇಶ ಮಾಡಿದೆ.

ಆದರೆ, ಕಾಂಗ್ರೆಸ್ ನಮ್ಮ ಮೇಲೆಯೆ ಆರೋಪ ಮಾಡುತ್ತಿದೆ. ಸಚಿವ ಅಶ್ವತ್ಥ ನಾರಾಯಣ ಅವರ ವಿರುದ್ಧ ದಾಖಲೆಗಳಿದ್ದರೆ ಕೊಡಿ,ಎಂದು ಹೇಳಿದ ಸಚಿವರು ಭ್ರಷ್ಟಾಚಾರದ ಜನಕ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ನಾಯಕರು ದೇಶವನ್ನು ಲೂಟಿ ಮಾಡಿದ್ದಾರೆ. ಕಳೆದ 60 ವರ್ಷದಿಂದ ಇದೇ ತಪ್ಪು ಮಾಡುತ್ತ ಬಂದಿದ್ದಾರೆ. ಅವರ ತಪ್ಪನ್ನು ಬಿಜೆಪಿ ಸರಿ ಪಡಿಸುವ ಕೆಲಸ ಮಾಡುತ್ತಿದೆ. ನಮ್ಮ ಕೆಲಸ ಮುಂದಿನ ಚುನಾವಣೆಯಲ್ಲಿ ಶ್ರೀ ರಕ್ಷೆಯಾಗಲಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು