News Karnataka Kannada
Sunday, April 28 2024
ಗದಗ

ನಟ ಯಶ್​ ಬೆಂಗಾವಲು ವಾಹನ ಬೈಕ್‌ ಗೆ ಡಿಕ್ಕಿ; ಯುವಕ ಮೃತ್ಯು

New Project 2024 01 09t133513.095
Photo Credit : News Kannada

ಗದಗ: ನಟ ಯಶ್ ರ್ತ್‌ಡೇ ಶುಭಾಶಯ ಕೋರಿ ಬ್ಯಾನರ್ ಹಾಕುವಾಗ ಮೂವರು ಅಭಿಮಾನಿಗಳು ವಿದ್ಯುತ್‌ ಪ್ರವಹಿಸಿ ಸಾವನ್ನಪ್ಪಿದ್ದರು. ಮೃತರ ಕುಟುಂಬವನ್ನು ಭೇಟಿ ಮಾಡಿ ನಂತರ ಗಂಭೀರವಾಗಿ ಗಾಯಗೊಂಡ ಮೂವರು ಅಭಿಮಾನಿಗಳನ್ನು  ಆಸ್ಪತ್ರೆಗೆ ಹೋಗಿ ಭೇಟಿ ನೀಡಿದ್ದಾರೆ.

ಈ ವೇಳೆ ಯಶ್ ವಾಪಸ್‌ ತೆರಳುತ್ತಿದ್ದಾಗ ಯಶ್​ಗೆ ಭದ್ರತೆ ನೀಡುತ್ತಿದ್ದ ಪೊಲೀಸರ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಯುವಕ ನಿಖಿಲ್ ಎಂಬಾತನ ತಲೆಗೆ ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು (ಜ.9) ಬೆಳಗ್ಗೆ ನಿಖಿಲ್ ಸಾವನ್ನಪ್ಪಿದ್ದಾರೆ.  ಮೃತಪಟ್ಟ ನಿಖಿಲ್​​​ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ನಟ ಯಶ್ ಅವರನ್ನು ನೋಡಬೇಕು ಎಂದು ಹಿಂಬಾಲಿಸುತ್ತಿದ್ದ ನಿಖಿಲ್ ಸ್ಕೂಟಿ ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು ವಾಹನಕ್ಕೆ ಡಿಕ್ಕಿ ಆಗಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಿಖಿಲ್​ನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಖಿಲ್ ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು