ಗದಗ: ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸಚಿವ ಹೆಚ್.ಕೆ ಪಾಟೀಲ್ ಪರಿಹಾರ ವಿತರಣೆ ಮಾಡಿದ್ದಾರೆ.
ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಟ ಯಶ್ ಹುಟ್ಟುಹಬ್ಬ ಆಚರಿಸಲು ಬೃಹತ್ ಕಟೌಟ್ ನಿಲ್ಲಿಸುವ ವೇಳೆ ದುರ್ಘಟನೆ ನಡೆದಿತ್ತು. ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು, ನಾಲ್ವರು ಗಾಯಗೊಂಡಿದ್ದರು. ಮೃತಪಟ್ಟ ಮುರಳಿ, ನವೀನ್, ಹನುಮಂತ ಎಂಬವರ ಮನೆಗಳಿಗೆ ಸಚಿವ ಹೆಚ್.ಕೆ ಪಾಟೀಲ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಪರಿಹಾರ ಚೆಕ್ ವಿತರಿಸಿದ್ದಾರೆ.
ಈ ಸಂದರ್ಭದಲ್ಲಿ ಭೂ ಒಡೆತನ ಯೋಜನೆಯಡಿ ಸಂತ್ರಸ್ತ ಕುಟುಂಬದವರಿಗೆ ಭೂಮಿ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ಬಗ್ಗೆ ಅನುಕಂಪದ ದೃಷ್ಟಿಯಲ್ಲಿ ಸರ್ಕಾರ ಸೂಕ್ತ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವರು ಉತ್ತರಿಸಿದರು.