News Karnataka Kannada
Monday, April 29 2024
ಗದಗ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ಪರಿಹಾರ ವಿತರಣೆ

ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸಚಿವ ಹೆಚ್‌.ಕೆ ಪಾಟೀಲ್‌ ಪರಿಹಾರ ವಿತರಣೆ ಮಾಡಿದ್ದಾರೆ.
Photo Credit : News Kannada

ಗದಗ: ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದ ನಟ ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರ ಕುಟುಂಬಸ್ಥರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸಚಿವ ಹೆಚ್‌.ಕೆ ಪಾಟೀಲ್‌ ಪರಿಹಾರ ವಿತರಣೆ ಮಾಡಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಟ ಯಶ್ ಹುಟ್ಟುಹಬ್ಬ ಆಚರಿಸಲು ಬೃಹತ್‌ ಕಟೌಟ್‌ ನಿಲ್ಲಿಸುವ ವೇಳೆ ದುರ್ಘಟನೆ ನಡೆದಿತ್ತು. ವಿದ್ಯುತ್‌ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು, ನಾಲ್ವರು ಗಾಯಗೊಂಡಿದ್ದರು. ಮೃತಪಟ್ಟ ಮುರಳಿ, ನವೀನ್, ಹನುಮಂತ ಎಂಬವರ ಮನೆಗಳಿಗೆ ಸಚಿವ ಹೆಚ್‌.ಕೆ ಪಾಟೀಲ್‌ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಪರಿಹಾರ ಚೆಕ್‌ ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಭೂ ಒಡೆತನ ಯೋಜನೆಯಡಿ‌ ಸಂತ್ರಸ್ತ ಕುಟುಂಬದವರಿಗೆ ಭೂಮಿ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಈ ಬಗ್ಗೆ ಅನುಕಂಪದ ದೃಷ್ಟಿಯಲ್ಲಿ ಸರ್ಕಾರ ಸೂಕ್ತ ರೀತಿ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವರು ಉತ್ತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು