News Karnataka Kannada
Friday, May 10 2024
ಗದಗ

ಟಿಪ್ಪರ್ – ಕಾರ್ ಮಧ್ಯೆ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಲೆನೋ ಕಾರ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತ ಜ.4 ರಂದು ಸಂಭವಿಸಿದೆ.
Photo Credit : News Kannada

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಲೆನೋ ಕಾರ್ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಅಪಘಾತದ ವೇಳೆ ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತ ಜ.4 ರಂದು ಸಂಭವಿಸಿದೆ.

ಮಂಜುನಾಥ ಭಾಂಡಗೆ, ಸಂಜಿತ್ ಬೇವಿನಕಟ್ಟಿ, ರಾಘವೇಂದ್ರ ಕಟವಾಟೆ, ಕುಶಾಲ್ ಬೇವಿನಕಟ್ಟಿ ಗಾಯಾಳುಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಗದಗ ನಗರದ ದಾಸರ ಓಣಿ, ವಿಜಯನಗರ ಕಾಲೋನಿ ನಿವಾಸಿಗಳಾಗಿದ್ದಾರೆ.

ಟಿಪ್ಪರ್ ಚಾಲಕ ಅನ್ನಪ್ಪ ವಿರುದ್ಧ ಗದಗ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು