ಗದಗ: ಗದಗ ಜಿಲ್ಲೆಯಲ್ಲಿ ಮನೆ, ನಿವೇಶನಗಳನ್ನು ಕೊಡಿಸುವುದಾಗಿ ಹೇಳಿ ಜನರಿಗೆ ವಂಚನೆ ಮಾಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಬಂಧಿಸಿರುವ ಘಟನೆ ನಡೆದಿದೆ.
ಬಂಧಿತ ಆರೋಪಿ ರಾಜೀವ್ ಗಾಂಧಿ ನಗರ ನಿವಾಸಿ ವಿಜಯ್ ಶಿಂಧೆ. ಶ್ರೀ ಪುಟ್ಟರಾಜ ಫೈನಾನ್ಸ್ ಕಾರ್ಪೊರೇಷನ್ ಹೆಸರಲ್ಲಿ ಫೈನಾನ್ಸ್ ನಡೆಸುತ್ತಿದ್ದ ವಿಜಯ್ ಶಿಂಧೆ ಹಲವರಿಗೆ ನಿವೇಶನ, ಮನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ. ಚಿಟ್ ಫಂಡ್, ಬಂಗಾರದ ವ್ಯಾಪಾರ, ಪಿಗ್ಮಿ ಹೆಸರಲ್ಲಿಯೂ ಶಿಂಧೆ ಫೈನಾನ್ಸ್ ನಡೆಸುತ್ತಿದ್ದ.
ತನಗೆ ಎರಡು ವರ್ಷಗಳಿಂದ ಲಾಸ್ ಆಗಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹಲವರು ಆತನ ವಿರುದ್ಧ ದೂರು ನೀಡಲು ಮುಂದಾಗಿರಲಿಲ್ಲ. ಆದರೆ ವ್ಯಕ್ತಿಯೋರ್ವರು ಈತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು.
ಆರೋಪಿ ವಿಜಯ್ ಶಿಂಧೆ ಅವರನ್ನು ಪೊಲೀಸರು ಬಂಧಿಸಿದ್ದಾರೆ.